ಪ್ರಸ್ತುತ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ: ಅಮ್ಜದ್ ಪಟೇಲ್
ಕೊಪ್ಪಳ 11: ಪ್ರಸ್ತುತ ದಿನಮಾನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಿದ ಕೆಲಸ ಕಾರ್ಯಗಳಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಹೇಳಿದರು. ಅವರು ಮಂಗಳವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಜೀಂ ಪ್ರೇಮಜೀ ಫೌಂಡೇಷನ್, ಭಾಗ್ಯನಗರದ ವಾಸವಿ ಕ್ಲಬ್ ಹಾಗೂ ಪಾನಘಂಟಿ ಫೌಂಡೇಷನ್ ಇವರುಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ್ರ್ರಥಮವಾಗಿ ಮಹಿಳೆಯರ ಶಿಕ್ಷಣಕ್ಕಾಗಿ ಹೋರಾಡಿದ ಮಹಿಳೆ ಸಾವಿತ್ರಿ ಬಾಪುಲೆ ಅವರಾಗಿದ್ದು, ಮಹಿಳೆಯರು ತಮ್ಮ ಜೀವನದಲ್ಲಿ ಸಾವಿತ್ರಿ ಬಾಪುಲೆ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಸಮಾಜದ ಪರಿವರ್ತನೆ, ಅಭಿವೃದ್ಧಿಗೆ ಶ್ರಮಿಸಬೇಕು. ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಮಾತನಾಡಿ, ಪ್ರಪಂಚದಲ್ಲಿ ಮಹಿಳೆಯರು ಕೆಲಸ ಕಾರ್ಯಗಳಲ್ಲಿ ವಹಿಸುವ ಶ್ರಮ ಹೆಚ್ಚಿದೆ. ನಮ್ಮ ದೇಶದಲ್ಲಿನ ಪ್ರತಿ ಅಂಗನವಾಡಿಗಳಲ್ಲಿ 3 ರಿಂದ 6 ವರ್ಷದ ಮಕ್ಕಳ ಲಾಲನೆ-ಪಾಲನೆ, ಮಕ್ಕಳ ಶಿಕ್ಷಣ, ಚಿಕ್ಕ ಮಕ್ಕಳು ದೈಹಿಕವಾಗಿ ಸದೃಢರಾಗಿ ಬೆಳೆಯಲು ಅಂಗನವಾಡಿ ಕಾರ್ಯಕರ್ತೆಯರ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್ ದರಗದ ಅವರು ಮಾತನಾಡಿ, ಶರಣರ ವಚನಗಳಲ್ಲಿ ಹೆಣ್ಣುಮಕ್ಕಳ ಶ್ರಮ ಮತ್ತು ಕೆಲಸ ಕಾರ್ಯಗಳ ಕುರಿತು ವರ್ಣಿಸಲಾಗಿದೆ. ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಸಮಾಜದ ಪರಿವರ್ತನೆಗೆ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಸಂವಿಧಾನದಲ್ಲಿನ ಇರುವಂತಹ ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗೆ ಇರುವ ಕಾನೂನು ಸುವ್ಯವಸ್ಥೆ, ಮಹಿಳೆಯರ ಸುರಕ್ಷತೆ, ಮಹಿಳೆಯರಿಗೆ ತೊಂದರೆ ಅನ್ಯಾಯ, ಕಿರುಕುಳವಾದಾಗ ಯಾವ ರೀತಿಯ ಕಾನೂನು ಕ್ರಮಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಕೊಳ್ಳಬೇಕು ಎಂಬುವುದುರ ಬಗ್ಗೆ ಮಹಿಳೆಯರು ತಿಳಿದುಕೊಳ್ಳಬೇಕು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಅವರು ಮಾತನಾಡಿ, ಮಹಿಳೆಯರ ಶಕ್ತಿ ಆಗಾಧವಿಚ್ವ ಎಂದರು. ಬಾಲ್ಯವಿವಾಹವನ್ನು ತಡೆಗಟ್ಟಲು ಪ್ರಥಮ ಹಂತದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಪ್ರಮುಖ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಪ್ರಶಸ್ತಿ ಪ್ರದಾನ ಸಮಾರಂಭ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ಯ ವಿವಿಧ ಕೇತ್ರಗಳಲ್ಲಿ ಸಾಧನಗೈದ ಮಕ್ಕಳಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆಯಡಿಯಲ್ಲಿ ಅತ್ಯುತ್ತಮ ಕೆಲಸ ಕಾರ್ಯ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಅಂಗನವಾಡಿ ಸಹಾಯಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ರಂಗೋಲಿ ಸ್ಪರ್ಧೆ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ರಂಗೋಲಿ ಸ್ಪರ್ಧೆಯನ್ನು ಏರಿ್ಡಸಲಾಗಿತ್ತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಉಪನಿರ್ದೇಶಕ ಪರುಶುರಾಮ ವೈ ಶೆಟ್ಟೆಪ್ಪನವರ್, ಜಿಲ್ಲಾ ನಿರೂಪಣಾಧಿಕಾರಿ ಗಂಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತೇಶ ಪೂಜಾರ್, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ಹರೀಶ ಜೋಗಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಯೋಜನಾಧಿಕಾರಿ ಅನ್ನಪೂರ್ಣ ಸೇರಿದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಬ್ಬಂದಿಗಳು, ಮಹಿಳೆಯರು ಮಕ್ಕಳು ಉಪಸ್ಥಿತರಿದ್ದರು.