ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಮೂವರು ಸಾವು
ಕೊಪ್ಪಳ, ಅ 15: ಭಾರಿ ಮಳೆಗೆ ಮನೆಯೊಂದರ ಮೇಲ್ಛಾವಣಿ ಕುಸಿದು ಬಿದ್ದು ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಕೊಪ್ಪಳ ಯಲಮಗೇರಿ ಗ್ರಾಮದಲ್ಲಿ ನಡೆದಿದೆ. ಅಕ್ಕ ಸುಜಾತ(22) ತಮ್ಮಂದಿರಾದ ಅಮರೇಶ್ (18) ಹಾಗೂ ಗವಿಸಿದ್ದಪ್ಪ (15) ಮೃತ ದುರ್ದೈವಿಗಳು. ರಾತ್ರಿ ಮನೆಯಲ್ಲಿ ಮಲಗಿದ್ದಾಗ ಸುಮಾರು 3 ಗಂಟೆಗೆ ಮನೆಯ ಮೇಲ್ಛಾವಣಿ ಕುಸಿದು ಮೂವರು ಮೃಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಾವಿನ ದವಡೆಯಿಂದ ತಂದೆ ಸೋಮಣ್ಣ ಕುದುರಿಮೋತಿ ಪಾರಾಗಿದ್ದಾರೆ. ಬೆಳೆದುನಿಂತಿದ್ದ ಮೂವರು ಮಕ್ಕಳನ್ನು ಕಳೆದುಕೊಂಡ ಕುಟುಂಬ ಬಡವಾಗಿದ್ದು, ಗ್ರಾಮದಲ್ಲಿ ನೀರವಮೌನ ಆವರಿಸಿದೆ. ಸಂಬಂಧಿಕರು ಹಾಗೂ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 