ಮನೆಯ ಮೇಲ್ಛಾವಣಿ ಕುಸಿತ ಮೃತರ ಕುಟುಂಬಕ್ಕೆ 15ಲಕ್ಷ ರೂ. ಪರಿಹಾರದ ಚೆಕ್ ವಿತರಣೆ
ಲೋಕದರ್ಶನ ವರದಿ
ಕೊಪ್ಪಳ: ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಸಂಸದ ಸಂಗಣ್ಣ ಕರಡಿ ಮತ್ತು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಪರಿಹಾರದ ಚೆಕ್ ವಿತರಿಸಿದರು.ನಿನ್ನೆ ಬೆಳಿಗ್ಗೆ ಕೊಪ್ಪಳ ತಾಲೂಕಿನ ಯಲಮಗೇರಿಯಲ್ಲಿ ಮನೆ ಮೇಲ್ಛಾವಣಿ ಕುಸಿದು ಸುಜಾತಾ (22) ಅಮರೇಶ್ (18) ಹಾಗೂ ಗವಿಸಿದ್ದಪ್ಪ ( 15) ಸಾವನ್ನಪ್ಪಿದ್ದರು. ಈ ಹಿನ್ನಲೆ, ಪರಿಹಾರ ನೀಡಲು ತಹಶೀಲ್ದಾರ್ಗೆ ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ಅವರು ಸೂಚನೆ ನೀಡಿದ್ದರು.
ಇಂದು ಸಂಸದ ಸಂಗಣ್ಣ ಕರಡಿ,ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಯಲಮಗೇರಿ ಗ್ರಾಮಕ್ಕೆ ತೆರಳಿ ಮೃತ ಮಕ್ಕಳ ತಂದೆ ಸೋಮಣ್ಣ ಅವರಿಗೆ 15 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿ,ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಈ ವೇಳೆ ಜಿ.ಪಂ.ಸದಸ್ಯ ರಾಮಣ್ಣ ಚೌಡ್ಕಿ, ಕೊಪ್ಪಳ ತಹಶೀಲ್ದಾರ್ ಜಿ.ಬಿ. ಮಜ್ಜಿಗೆ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 