ಮನೆಯ ಮೇಲ್ಛಾವಣಿ ಕುಸಿತ ಮೃತರ ಕುಟುಂಬಕ್ಕೆ 15ಲಕ್ಷ ರೂ. ಪರಿಹಾರದ ಚೆಕ್ ವಿತರಣೆ
ಲೋಕದರ್ಶನ ವರದಿ
ಕೊಪ್ಪಳ: ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಸಂಸದ ಸಂಗಣ್ಣ ಕರಡಿ ಮತ್ತು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಪರಿಹಾರದ ಚೆಕ್ ವಿತರಿಸಿದರು.ನಿನ್ನೆ ಬೆಳಿಗ್ಗೆ ಕೊಪ್ಪಳ ತಾಲೂಕಿನ ಯಲಮಗೇರಿಯಲ್ಲಿ ಮನೆ ಮೇಲ್ಛಾವಣಿ ಕುಸಿದು ಸುಜಾತಾ (22) ಅಮರೇಶ್ (18) ಹಾಗೂ ಗವಿಸಿದ್ದಪ್ಪ ( 15) ಸಾವನ್ನಪ್ಪಿದ್ದರು. ಈ ಹಿನ್ನಲೆ, ಪರಿಹಾರ ನೀಡಲು ತಹಶೀಲ್ದಾರ್ಗೆ ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ಅವರು ಸೂಚನೆ ನೀಡಿದ್ದರು.
ಇಂದು ಸಂಸದ ಸಂಗಣ್ಣ ಕರಡಿ,ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಯಲಮಗೇರಿ ಗ್ರಾಮಕ್ಕೆ ತೆರಳಿ ಮೃತ ಮಕ್ಕಳ ತಂದೆ ಸೋಮಣ್ಣ ಅವರಿಗೆ 15 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿ,ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಈ ವೇಳೆ ಜಿ.ಪಂ.ಸದಸ್ಯ ರಾಮಣ್ಣ ಚೌಡ್ಕಿ, ಕೊಪ್ಪಳ ತಹಶೀಲ್ದಾರ್ ಜಿ.ಬಿ. ಮಜ್ಜಿಗೆ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 