ಶೈಕ್ಷಣಿಕ ಗುಣಮಟ್ಟ, ಆಕರ್ಷಕ ಪರಿಸರ ಹಾಗೂ ವಿದ್ಯಾರ್ಥಿ ಸ್ನೇಹಿ ವಾತಾವರಣದಿಂದ ಗಮನ ಸೆಳೆಯುತ್ತಿರುವ ಶಾಲೆ
The school is attracting attention for its academic quality, attractive environment, and student-fri
ರಾಣೆಬೆನ್ನೂರು 30: ತಾಲ್ಲೂಕಿನ ಹಲಗೇರಿ ಗ್ರಾಮದ ಏಕೈಕ ಸರ್ಕಾರಿ ಉರ್ದು ಪ್ರೌಢಶಾಲೆ ಶಾಸಕರ ಕ್ಷೇತ್ರಾಭಿವೃದ್ಧಿ ಅನುದಾನದಿಂದ ಅಭಿವೃದ್ಧಿಗೊಂಡು ಹೊಸ ರೂಪ ಪಡೆದಿದೆ. ಶಾಲೆಯ ಕಟ್ಟಡದ ಸುಂದರೀಕರಣ, ಬಣ್ಣ ಬಳಿಯುವಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಯಿಂದ ಶಾಲೆ ಆಕರ್ಷಕವಾಗಿ ಕಂಗೊಳಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ.
ಶಾಸಕ ಪ್ರಕಾಶ ಕೋಳಿವಾಡ ಅವರು ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಶಾಲೆಯ ಅಭಿವೃದ್ಧಿಗೆ ವಿಶೇಷ ನೆರವು ನೀಡಿದ್ದು, ಇದರ ಪರಿಣಾಮವಾಗಿ ಶೈಕ್ಷಣಿಕ ಗುಣಮಟ್ಟದ ಜೊತೆಗೆ ವಿದ್ಯಾರ್ಥಿ ಸ್ನೇಹಿ ವಾತಾವರಣವೂ ನಿರ್ಮಾಣವಾಗಿದೆ. ಹಲಗೇರಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು ಇಲ್ಲಿ ಉರ್ದು ಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ.
ಅನುಭವಿ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಶಾಲೆಯ ಆವರಣದಲ್ಲಿ ಶೈಕ್ಷಣಿಕ ಚಿತ್ರಗಳು, ಪ್ರೇರಣಾದಾಯಕ ಸಂದೇಶಗಳು ಹಾಗೂ ಸ್ವಚ್ಛ ಪರಿಸರ ಕಲಿಕೆಗೆ ಪೂರಕ ವಾತಾವರಣವನ್ನು ನಿರ್ಮಿಸಿದ್ದು, ದಾಖಲಾತಿ ಸಂಖ್ಯೆಯೂ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ.
ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮಸುಂದರ ಅಡಿಕೆ ಮಾತನಾಡಿ, "ಶಾಸಕ ಪ್ರಕಾಶ ಕೋಳಿವಾಡ ಅವರ ಸಹಕಾರದಿಂದ ಶಾಲೆಯ ಅಭಿವೃದ್ಧಿಗೆ ಹೊಸ ಚೈತನ್ಯ ದೊರೆತಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಆದ್ಯತೆ ನೀಡಲಾಗುತ್ತಿದೆ. ಹೆಚ್ಚಿನ ವಿದ್ಯಾರ್ಥಿಗಳು ಸರ್ಕಾರಿ ಶಿಕ್ಷಣದ ಸೌಲಭ್ಯ ಪಡೆಯುವಂತಾಗಬೇಕು ಎಂಬುದು ನಮ್ಮ ಆಶಯ," ಎಂದು ಹೇಳಿದರು.
ಮುಖ್ಯಶಿಕ್ಷಕಿ ಚಿತ್ರಾವತಿ ಬೆನ್ನೂರು ಅವರು, "ಶಾಲೆಯಲ್ಲಿ ಉತ್ತಮ ಕಲಿಕಾ ವಾತಾವರಣ ನಿರ್ಮಾಣಗೊಂಡಿದ್ದು, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ," ಎಂದು ತಿಳಿಸಿದರು.
ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್ಡಿಎಂಸಿ) ಅಧ್ಯಕ್ಷ ಮುಜಮಿಲ್ ಖತೀಬ್ ಮಾತನಾಡಿ, "ಶಾಸಕರ ಅನುದಾನ, ಶಿಕ್ಷಣ ಇಲಾಖೆಯ ಸಹಕಾರ, ಶಿಕ್ಷಕರ ಸಮರೆ್ಣ ಹಾಗೂ ಪೋಷಕರ ವಿಶ್ವಾಸದಿಂದ ಹಲಗೇರಿ ಸರ್ಕಾರಿ ಉರ್ದು ಪ್ರೌಢಶಾಲೆ ಇಂದು ತಾಲ್ಲೂಕಿನ ಮಾದರಿ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ. ವಿದ್ಯಾರ್ಥಿಗಳಿಗೆ ಜ್ಞಾನ, ಸಂಸ್ಕಾರ ಹಾಗೂ ಉತ್ತಮ ಭವಿಷ್ಯ ರೂಪಿಸುವ ಕೇಂದ್ರವಾಗಿ ಶಾಲೆ ಬೆಳೆಯುತ್ತಿದೆ," ಎಂದು ಹೇಳಿದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 