ಎರಡನೇ ದಿನ ನಿಗದಿಯಿಂದ ಪಾದಯಾತ್ರೆ ಆರಂಭ
ಧಾರವಾಡ 29: ಸುಕ್ಷೇತ್ರ ಗರಗ ಮಡಿವಾಳೇಶ್ವರ ಕಲ್ಮಠದ ಆವರಣದಿಂದ ಸುಕ್ಷೇತ್ರ ಉಳವಿಯವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಯು ಎರಡನೇ ದಿನವೂ ಯಶಸ್ವಿಯಾಗಿ ನಡೆಯಿತು.
ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ, ಪತ್ನಿ ಪ್ರಿಯಾ ದೇಸಾಯಿ ಸೇರಿದಂತೆ ಸಾವಿರಾರು ಸದ್ಭಕ್ತರು ಎರಡನೇ ದಿನ ಶುಕ್ರವಾರ ನಿಗದಿ ಗ್ರಾಮದಿಂದ ಪಾದಯಾತ್ರೆಯನ್ನು ಮುಂದುವರೆಸಿದರು.
ಪಾದಯಾತ್ರೆ ಆರಂಭಕ್ಕೂ ಮುನ್ನ ನಿಗದಿ ಗ್ರಾಮಸ್ಥರು ಶಾಸಕ ಅಮೃತ ದೇಸಾಯಿ ಅವರಿಗೆ ಹೃದಯಸ್ಪಶರ್ಿ ಬೀಳ್ಕೊಡುಗೆ ನೀಡಿದರು.
ಬಳಿಕ ಎರಡನೇ ದಿನದ ಪಾದಯಾತ್ರೆಯೂ ನಿಗದಿಯಿಂದ ಆರಂಭಗೊಂಡು ರಾತ್ರಿಯವರೆಗೆ ನಡೆದು, ಬಳಿಕ ಹಳಿಯಾಳ ಕಕರ್ಾ ಟ್ಯಾಂಕ್ ಬಳಿ ಅಂತ್ಯಗೊಳಿಸಿ ಅಲ್ಲಿಯೇ ವಾಸ್ತವ್ಯ ಮಾಡಿದರು.
ಮಡಿವಾಳೇಶ್ವರ ಮಠದ ಟ್ರಸ್ಟ ಕಾರ್ಯಧ್ಯಕ್ಷ ಅಶೋಕ ದೇಸಾಯಿ, ಧಾರವಾಡ ಹಾಲು ಒಕ್ಕೂಟದ ನಿದರ್ೇಶಕ ಶಂಕರ ಮುಗದ, ಗರಗ ಮತ್ತು ಹಂಗರಕಿ ಗ್ರಾಮದ ನೂರಾರು ಗುರು ಹಿರಿಯರು ಹಾಗೂ ಸಾವಿರಾರು ಭಕ್ತರು ಪಾದಯಾತ್ರೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು.
ಹರ ಹರ ಮಹಾದೇವ, ಗರಗ ಮಡಿವಾಳೇಶ್ವರ ಮಹಾರಾಜಕೂ ಜೈ, ಉಳವಿ ಚನ್ನಬಸವೇಶ್ವರ ಮಹಾರಾಜಕೂ ಜೈ ಎಂದು ಘೋಷಣೆಗಳು ಮುಗಿಲು ಮುಟ್ಟಿದ್ದವು .
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 