ನ್ಯಾಯಾಂಗ ಇತಿಹಾಸದಲ್ಲಿ ಎರಡನೇ ಅತಿದೊಡ್ಡ ವಿಚಾರಣೆ
ನವದೆಹಲಿ, ನ 9 : ಅಯೋಧ್ಯಾ ಪ್ರಕರಣದ ವಿಚಾರಣೆ ದೇಶದ ನ್ಯಾಯಾಂಗ ಇತಿಹಾಸದಲ್ಲೇ ನಡೆದ ಅತಿ ದೊಡ್ಡ ದೀರ್ಘಕಾಲದ ಎರಡನೇ ವಿಚಾರಣೆಯಾಗಿದೆ. ಕಳೆದ ಆಗಸ್ಟ್ 6 ರಿಂದ ಆರಂಭವಾದ ರಾಮ ಜನ್ಮಭೂಮಿ ವಿವಾದದ ವಿಚಾರಣೆ ಸತತ 40 ದಿನಗಳ ಕಾಲ ನಡೆದಿದೆ. ಇದಕ್ಕೆ ಮೊದಲು ಕೇಶವಾನಂದ ಭಾರತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಲ್ಲಿ 60 ದಿನಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆದು ಹೊಸ ದಾಖಲೆ ನಿರ್ಮಾಣವಾಗಿತ್ತು. ಅಯೋಧ್ಯಾ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್ಇತಿಹಾಸದಲ್ಲಿ ಎರಡನೇ ದೀರ್ಘಕಾಲೀನ ವಿಚಾರಣೆಯಾಗಿದೆ ಎಂಬುದು ಕಾನೂನು ಪಂಡಿತರ ಅಭಿಪ್ರಾಯವಾಗಿದೆ. ಅಯೋಧ್ಯಾ ಭೂ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಖಲೀಫುಲ್ಲಾ ನೇತೃತ್ವದ ಸಮಿತಿಯನ್ನು ಸುಪ್ರೀಂಕೋರ್ಟ್ ನೇಮಕ ಮಾಡಿತ್ತು. ಆದರೆ ಸಂಧಾನ ಸಮಿತಿ ಸರ್ವ ಸಮ್ಮತ ಪರಿಹಾರ ರೂಪಿಸುವಲ್ಲಿ ವಿಫಲವಾದ ನಂತರ ನ್ಯಾಯಾಲಯ ಕಳೆದ ಆಗಸ್ಟ್ 6 ರಿಂದ ಆದ್ಯತೆ ಮೇರೆಗೆ ಸತತ 40 ದಿನಗಳ ಕಾಲ ವಿಚಾರಣೆಯನ್ನು ನಡೆಸಿತ್ತು. ನಿವೃತ್ತ ನ್ಯಾಯಮೂರ್ತಿ ಖಲೀಫುಲ್ಲಾ ನೇತೃತ್ವದಲ್ಲಿ ಮೂವರು ಸದಸ್ಯರ ಮಧ್ಯಸ್ಥಿಕೆ ಸಮಿತಿಯನ್ನು ಸುಪ್ರೀಂಕೋರ್ಟ್ ರಚನೆ ಮಾಡಿತ್ತು. ಬೆಂಗಳೂರು ಮೂಲದ ಆರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ ಮತ್ತು ಹಿರಿಯ ವಕೀಲ ಶ್ರೀರಾಮ ಪಂಚು ಈ ಸಮಿತಿಯಲ್ಲಿ ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 