ನ್ಯಾಯಾಂಗ ಇತಿಹಾಸದಲ್ಲಿ ಎರಡನೇ ಅತಿದೊಡ್ಡ ವಿಚಾರಣೆ
ನವದೆಹಲಿ, ನ 9 : ಅಯೋಧ್ಯಾ ಪ್ರಕರಣದ ವಿಚಾರಣೆ ದೇಶದ ನ್ಯಾಯಾಂಗ ಇತಿಹಾಸದಲ್ಲೇ ನಡೆದ ಅತಿ ದೊಡ್ಡ ದೀರ್ಘಕಾಲದ ಎರಡನೇ ವಿಚಾರಣೆಯಾಗಿದೆ. ಕಳೆದ ಆಗಸ್ಟ್ 6 ರಿಂದ ಆರಂಭವಾದ ರಾಮ ಜನ್ಮಭೂಮಿ ವಿವಾದದ ವಿಚಾರಣೆ ಸತತ 40 ದಿನಗಳ ಕಾಲ ನಡೆದಿದೆ. ಇದಕ್ಕೆ ಮೊದಲು ಕೇಶವಾನಂದ ಭಾರತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಲ್ಲಿ 60 ದಿನಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆದು ಹೊಸ ದಾಖಲೆ ನಿರ್ಮಾಣವಾಗಿತ್ತು. ಅಯೋಧ್ಯಾ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್ಇತಿಹಾಸದಲ್ಲಿ ಎರಡನೇ ದೀರ್ಘಕಾಲೀನ ವಿಚಾರಣೆಯಾಗಿದೆ ಎಂಬುದು ಕಾನೂನು ಪಂಡಿತರ ಅಭಿಪ್ರಾಯವಾಗಿದೆ. ಅಯೋಧ್ಯಾ ಭೂ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಖಲೀಫುಲ್ಲಾ ನೇತೃತ್ವದ ಸಮಿತಿಯನ್ನು ಸುಪ್ರೀಂಕೋರ್ಟ್ ನೇಮಕ ಮಾಡಿತ್ತು. ಆದರೆ ಸಂಧಾನ ಸಮಿತಿ ಸರ್ವ ಸಮ್ಮತ ಪರಿಹಾರ ರೂಪಿಸುವಲ್ಲಿ ವಿಫಲವಾದ ನಂತರ ನ್ಯಾಯಾಲಯ ಕಳೆದ ಆಗಸ್ಟ್ 6 ರಿಂದ ಆದ್ಯತೆ ಮೇರೆಗೆ ಸತತ 40 ದಿನಗಳ ಕಾಲ ವಿಚಾರಣೆಯನ್ನು ನಡೆಸಿತ್ತು. ನಿವೃತ್ತ ನ್ಯಾಯಮೂರ್ತಿ ಖಲೀಫುಲ್ಲಾ ನೇತೃತ್ವದಲ್ಲಿ ಮೂವರು ಸದಸ್ಯರ ಮಧ್ಯಸ್ಥಿಕೆ ಸಮಿತಿಯನ್ನು ಸುಪ್ರೀಂಕೋರ್ಟ್ ರಚನೆ ಮಾಡಿತ್ತು. ಬೆಂಗಳೂರು ಮೂಲದ ಆರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ ಮತ್ತು ಹಿರಿಯ ವಕೀಲ ಶ್ರೀರಾಮ ಪಂಚು ಈ ಸಮಿತಿಯಲ್ಲಿ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 