ಸಚಿವ ಎಂ. ಬಿ. ಪಾಟೀಲ ಪ್ರಯತ್ನದ ಫಲವಾಗಿ ಕ್ರೀಡಾಂಗಣ ನಿರ್ಮಾಣ
The stadium was built as a result of the efforts of Minister M. B. Patil
ವಿಜಯಪುರ 23: ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಪ್ರಯತ್ನದ ಫಲವಾಗಿ ಬಬಲೇಶ್ವರ ಪಟ್ಡಣದಲ್ಲಿ ತಾಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ಮಂಜೂರಾತಿ ಸಿಕ್ಕಿದೆ.
ಬಬಲೇಶ್ವರ ಪಟ್ಡಣದಲ್ಲಿ ಎಂಟು ಎಕರೆ ಜಮೀನು ಲಭ್ಯವಿದ್ದು ಈ ಜಮೀನಿನಲ್ಲಿ ತಾಲೂಕು ಕ್ರೀಡಾಂಗಣ ನಿರ್ಮಿಸಲು ಪ್ರಸಕ್ತ ಬಜೆಟ್ ನಲ್ಲಿ ಘೋಷಿಸಿದಂತೆ ಈಗ ಮಂಜೂರಾತಿ ದೊರೆತಿದೆ. ಈ ಕ್ರೀಡಾಂಗಣ ನಿರ್ಮಾಣಕ್ಕೆ ಒಟ್ಟು ರೂ. 2 ಕೋಟಿ ಅನುದಾನ ಸಿಗಲಿದೆ. ತಾಲೂಕು ಕ್ರೀಡಾಂಗಣಕ್ಕೆ ಮಂಜೂರಾತಿ ದೊರೆತಿರುವುದಕ್ಕೆ ಬಬಲೇಶ್ವರ ತಾಲೂಕಿನ ಜನತೆ ಸಂತಸ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ತಾಲೂಕಿನ ಕ್ರೀಡಾಪಟುಗಳಿಗೆ ಅನುಕೂಲವಾಗಲಿದ್ದು, ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ನೆರವಾಗಲಿದೆ.
ಈ ಕ್ರೀಡಾಂಗಣ ಮಂಜೂರಾಗಲು ಕ್ರಮ ಕೈಗೊಂಡಿರುವ ಸಚಿವ ಎಂ. ಬಿ. ಪಾಟೀಲ ಅವರಿಗೆ ಬಬಲೇಶ್ವರ ತಾಲೂಕಿನ ಜನತೆ ಕೃತಜ್ಞತೆ ಸಲ್ಲಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 