ರಾಜ್ಯದಲ್ಲಿ 2999 ಗ್ರಾಮಗಳಿಗೆ ಟ್ಯಾಂಕರ ನೀರು
ಗದಗ 19: ರಾಜ್ಯದಲ್ಲಿ ಬರಗಾಲ ತೀವ್ರ ಸ್ವರೂಪ ಪಡದಿರುವುದರಿಂದ ಒಟ್ಟು 2999 ಗ್ರಾಮಗಳಿಗೆ ಟ್ಯಾಂಕರ ನೀರು ಪೂರೈಸಲಾಗುತ್ತಿದೆ ಎಂದು ಕಂದಾಯ ಸಚಿವರಾದ ಆರ್.ವಿ.ದೇಶಪಾಂಡೆ ಹೇಳಿದರು.
ಈಗಾಗಲೇ ಸುಮಾರು 730 ಕೋಟಿ ರೂ. 30 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜಂಟಿ ಖಾತೆಯಲ್ಲಿದೆ. ಜಾನುವಾರುಗಳಿಗೆ ಕೂಡಿಯುವ ನೀರಿನ, ಮೇವಿನ ಅಭಾವ ಆಗದಂತೆ ಜನರಿಗೆ ಉದ್ಯೋಗ ದೊರೆಯುವಂತೆ ಹಾಗೂ ಯಾರು ಗುಳೆ ಹೊಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಕಳೆದ ಬಾರಿ ರಾಜ್ಯದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ 10.47 ಕೋಟಿ ಮಾನವ ದಿನಗಳನ್ನು ಉತ್ಪದಿಸಲಾಗಿದ್ದು, ಈ ಬಾರಿ 13 ಕೋಟಿ ಮಾನವ ದಿನಗಳನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ. ಪ್ರಸಕ್ತ ಸಾಲಿನಲ್ಲಿ 150 ದಿನಗಳ ಉದ್ಯೋಗ ನೀಡಲಾಗುತ್ತ್ತಿದೆಯೆಂದು ತಿಳಿಸಿದರು. ರಾಜ್ಯದಲ್ಲಿ ಕಳೆದ 14 ವರ್ಷಗಳಿಂದ ಸತತ ಬರಗಾಲವಿದ್ದು, ಪ್ರತಿ ವರ್ಷ ತಲೆದೋರುವ ಈ ಬರಗಾಲವನ್ನು ಎದುರಿಸಲು ಶಾಶ್ವತ ಪರಿಹಾರ ಕ್ರಮಗಳನ್ನು ಕಂಡುಕೊಳ್ಳಬೇಕಾಗಿದ್ದು ಈ ಕುರಿತಂತೆ ಜಿಲ್ಲಾಡಳಿತಗಳು ಸ್ಥಳೀಯ ಹಾಗೂ ಅಗತ್ಯ ಸಂಪನ್ಮೂಲಗಳನ್ನು ಆಧಾರವಾಗಿಟ್ಟುಕೊಂಡು ಪ್ರಸ್ತಾವನೆಯನ್ನು ತಯಾರಿಸಲು ಸೂಚಿಸಲಾಗಿದೆ ಎಂದರು.
ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಲ್ಲಿ ಶೇ. 41 ರಷ್ಟು ಕೊರತೆ ಎದುರಿಸಿದ್ದು ಮುಂಗಾರು ಮಳೆಯವರೆಗೂ ಜಿಲ್ಲಾಡಳಿತಗಳು ತಮ್ಮ ಜಿಲ್ಲೆಯ ಜನರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಸಚಿವ ದೇಶಪಾಂಡೆ ಸೂಚಿಸಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 