ಸರ್ವಜ್ಞನ ತ್ರಿಪದಿಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಂದೇಶಗಳಾಗಿವೆ
The three verses of the omniscient are messages that correct the wrongs of society
ಹಾವೇರಿ 18: ಸರ್ವಜ್ಞರ ತ್ರಿಪದಿ ಸಾಹಿತ್ಯವು ಮೂಢನಂಬಿಕೆಗಳನ್ನು ಖಂಡಿಸಿ ವೈಚಾರಿಕ, ವೈಜ್ಞಾನಿಕ ಮತ್ತು ತಾರ್ಕಿಕ ಚಿಂತನೆಗೆ ಹಚ್ಚುತ್ತವೆ ಎಂದು ಮಾಸೂರಿನ ಎಸ್ ಬಿ ಪಾಟೀಲ್ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಕೆ ಆರ್ ಕೊಣ್ತಿ ಹೇಳಿದರು
ಹಿರೇಕೆರೂರು ನಗರದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಹಾವೇರಿ ಜಿಲ್ಲಾ ಚಕೋರ ಸಾಹಿತ್ಯ ವಿಚಾರ ವೇದಿಕೆ ವತಿಯಿಂದ ಏರಿ್ಡಸಿದ್ದ ತ್ರಿಪದಿ ಕವಿ ಸರ್ವಜ್ಞರ ಸಾಹಿತ್ಯದಲ್ಲಿ ಸಾಮಾಜಿಕ ಪ್ರಜ್ಞೆ ಎಂಬ ವಿಶೇಷ ಉಪನ್ಯಾಸ ವಿಷಯದ ಕುರಿತು ಮಾತನಾಡಿದ ಅವರು, ಸರ್ವಜ್ಞ ತ್ರಿಪದಿಗಳು ಅವು ಬರಿ ಕವಿತೆಗಳಲ್ಲ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಸಲಹೆ ಸೂಚನೆ ಮಾರ್ಗದರ್ಶನ ನೀಡುವ ಸಂದೇಶಗಳಾಗಿವೆ ಎಂದರು.
ಮಾನವೀಯ ಮೌಲ್ಯಗಳನ್ನು ಮೂಡಿಸಿ ಸರ್ವರು ಸಮಾನರು ಎಂಬ ಭಾವನೆಯನ್ನು ಮೂಡಿಸುತ್ತವೆ. ಸರ್ವಜ್ಞರಿಗೆ ಲೌಕಿಕ ಬದುಕಿನ ಅನುಭವ ಹಾಗೂ ಆಧ್ಯಾತ್ಮಿಕ ಅನುಭಾವಗಳನ್ನು ಬಲ್ಲವರಾದ್ದರಿಂದ ಅವರ ಸಾಹಿತ್ಯದಲ್ಲಿ ಶಿಸ್ತು, ಜ್ಞಾನ,ಭಕ್ತಿ,ನೇರ ನುಡಿ,ಸರಳತೆ ವೈಚಾರಿಕ ಹಾಗೂ ವೈಜ್ಞಾನಿಕತೆ ಅವರ ತ್ರಿಪದಿಗಳ ಸಾರವಾಗಿವೆ ಎಂದರು.
ಜಾತಿ ತಾರತಮ್ಯವಿರದ ಸೌಹಾರ್ದ ಸಾಮರಸ್ಯದ ಸಮ ಸಮಾಜ ನಿರ್ಮಿಸಲು ಜನತೆಯಲ್ಲಿ ಸಾಮಾಜಿಕ ಪ್ರಜ್ಞೆಯನ್ನು ಮೂಡಿಸಿದರು ಸರ್ವಜ್ಞರು ಸಮಾಜೋದ್ಧಾರದ ಸಂದೇಶಗಳನ್ನು ಸಾರಿದ್ದಾರೆ ಎಂದು ಹೇಳಿದರು. ಸಾಹಿತಿ ಬಸವರಾಜ ಪೂಜಾರ ಮಾತನಾಡಿ ಇಂದಿನ ಯುವ ಜನತೆ ಸರ್ವಜ್ಞರ ಸಾಹಿತ್ಯವನ್ನು ಓದಿ ಅವರ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಗುಡ್ಡಪ್ಪ ಮಾಳಗುಡ್ಡಪ್ಪನವರ ಮಾತನಾಡಿ, ಸರ್ವಜ್ಞರ ಸಾಹಿತ್ಯ ಸರ್ವರಿಗೂ ಮುಟ್ಟುವಂತಾಗಲಿ ಸರ್ಕಾರ, ಸಾಹಿತ್ಯ ಅಕಾಡೆಮಿ ಸರ್ವಜ್ಞರ ತ್ರಿಪದಿ ಸಾಹಿತ್ಯದ ಕುರಿತು ಸಂಶೋಧನೆ, ಪುಸ್ತಕ ಪ್ರಕಟಣೆ ಹೆಚ್ಚು ಹೆಚ್ಚು ಕೈಗೊಳ್ಳುಲಿ. ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರ ಶೀಘ್ರ ಕಾರ್ಯೋನಮುಖವಾಗಿ ಕಾರ್ಯಪ್ರವೃತ್ತವಾಗಲೆಂದು ಆಶಿಸಿದರು.
ಚಕೋರ ಸಾಹಿತ್ಯ ವಿಚಾರ ವೇದಿಕೆ ಜಿಲ್ಲಾ ಸಂಚಾಲಕ ಮಾರುತಿ ತಳವಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಕುಮಾರ ಮಡಿವಾಳರ ವಿದ್ಯಾರ್ಥಿ ವೇದಿಕೆ ಪ್ರತಿನಿಧಿ ಕುಮಾರಿ ರೇಣುಕಾ ಹಾಗೂ ರವಿ ಭಜಂತ್ರಿ ಉಪಸ್ಥಿತರಿದ್ದರು. ಸೃಷ್ಟಿ ಅಂಕಿತ ಪ್ರಾರ್ಥಿಸಿದರು,ಕು. ದೀಪಾ ಹರಿಯಪ್ಪನವರ ನಿರೂಪಿಸಿದರು ಕಾಂಚನ ಮಡಿವಾಳರ ಸ್ವಾಗತಿಸಿದರು, ರಾಧಿಕಾ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 