ರೈಲು ಹಾಯ್ದು 20ಕ್ಕೂ ಹೆಚ್ಚು ಕುರಿಗಳ ಸಾವು
ವಿಜಯಪುರ, 23 : ರೈಲು ಹಾಯ್ದು 20 ಕ್ಕೂ ಹೆಚ್ಚು ಕುರಿಗಳು ಹಾಗೂ ಮೇಕೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಶುಕ್ರವಾರ ಬೆಳಿಗ್ಗೆ 10.30 ರ ಸುಮಾರಿಗೆ ನಗರ ಹೊರವಲಯದ ಅಲಿಯಾಬಾದ ಸಮೀಪ ಸಂಭವಿಸಿದೆ.
ರೇಲ್ವೆ ಹಳಿ ಪಕ್ಕದಲ್ಲಿ ಕುರಿಗಳು ಮೇಯುತ್ತಿದ್ದಾಗ ಅದೇ ವೇಳೆ ವಿಜಯಪುರದಿಂದ-ಸೊಲ್ಲಾಪೂರಕ್ಕೆ ರೈಲು ಹೊರಟಿತ್ತು. ಆಗ ರೈಲಿನ ಸದ್ದು ಕೇಳಿ ಕುರಿಗಳು ಗಾಬರಿಗೊಂಡು ಹಿಂಡು-ಹಿಂಡಾಗಿ ಓಡಿ ಹೋಗುವಾಗ ರೈಲಿನಡಿ ಸಿಕ್ಕು ಸಾವನ್ನಪ್ಪಿವೆ ಎಂದು ರೇಲ್ವೆ ಪೊಲೀಸರು ತಿಳಿಸಿದ್ದಾರೆ.
ಪಾಂಗರೂನ ಹಟ್ಟಿಯ ಸಾಳುಂಕೆ ಎಂಬವರಿಗೆ ಈ ಕುರಿಗಳು ಸೇರಿವೆ ಎನ್ನಲಾಗಿದೆ.
ರೈಲು ಹಾಯ್ದು ಕುರಿಗಳು ಸಾವನ್ನಪ್ಪಿದ್ದರಿಂದ ಸಾಳುಂಕೆ ಅವರಿಗೆ ತುಂಬಾ ಹಾನಿಯಾಗಿದೆ. ಘಟನೆಯಿಂದಾಗಿ ತೀವ್ರ ನೊಂದಿರುವ ಅವರ ಆಕ್ರಂದನ ಮುಗಿಲು ಮುಟ್ಟಿದೆ.
ರೈಲ್ವೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ವಿಜಯಪುರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 