ದೇಸಿ ಕ್ರೀಡೆಗಳ ಜೀವಂತಿಕೆ
ಗುಳೇದಗುಡ್ಡ 12: ಕ್ರೀಡೆಗಳು ವ್ಯಕ್ತಿಯನ್ನು ದೈಹಿಕವಾಗಿ ಸಧೃಡವಾಗಿ ಮಾಡುವುದರ ಜೊತೆಗೆ ಆರೋಗ್ಯವಂತನನ್ನಾಗಿ ಮಾಡುತ್ತವೆ. ಕಬಡ್ಡಿ ನಮ್ಮ ದೇಶಿಯ ಕ್ರೀಡೆಯಾಗಿದ್ದೂ ಗ್ರಾಮೀಣ ಭಾಗದಲ್ಲಿಯೇ ಇನ್ನೂ ದೇಶಿ ಕ್ರೀಡೆಗಳು ಜೀವಂತವಾಗಿವೆ ಎಂದು ಕೋಟೆಕಲ್ ಮಠದ ಹೊಳೆಹುಚ್ಚೇಶ್ವರ ಶ್ರೀಗಳು ಹೇಳಿದರು.
ಅವರು ಸಮೀಪದ ಕೊಟೆಕಲ್ ಗ್ರಾಮದಲ್ಲಿ ಹೊಳೆಹುಚ್ಚೇಶ್ವರ ಸಂಸ್ಥಾನಮಠದ ಜಾತ್ರಾ ಮಹೋತ್ಸವ ನಿಮಿತ್ತ ಜಾತ್ರಾ ಮಹೋತ್ಸವ ಸಮಿತಿ, ಜಿಲ್ಲಾ ಕಬಡ್ಡಿ ಅಮೇಚೂರ ಅಸೋಸಿಯೇಶನ್ ವತಿಯಿಂದ ನಡೆದ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡ ಪಂದ್ಯಾವಳಿಯಲ್ಲಿ ಸಾನಿಧ್ಯ ವಹಿಸಿ ಮಾತನಾಡಿ, ಇಂದಿನ ಯುವಕರು ಮೊಬೈಲ್ನಲ್ಲಿ ಕಳೆದು ಹೋಗುತ್ತಿದ್ದು, ಇದರಿಂದ ದೇಶಿ ಕ್ರೀಡೆಗಳ ಬಗ್ಗೆ ಆಸಕ್ತಿ ಕಳೆದುಕೊಳ್ಳುತ್ತಿದ್ದು, ಪ್ರತಿಯೊಬ್ಬರು ದೇಶಿ ಕ್ರೀಡೆಗಳನ್ನು ಬೆಳೆಸಬೇಕು ಎಂದು ಹೇಳಿದರು. ರಾಷ್ಟ್ರೀಯ ಕಬಡ್ಡಿ ಆಟಗಾರ ಹಿರೇಗೌಡರ, ಜಿಪಂ ಮಾಜಿ ಉಪಾಧ್ಯಕ್ಷ ಹನಮಂತ ಮಾವಿನಮರದ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಲಕ್ಷ್ಮಿಬಾಯಿ ಸೀತಿಮನಿ ಅಧ್ಯಕ್ಷತೆ ವಹಿಸಿದ್ದರು.
ಕಬಡ್ಡಿ ಪಂದ್ಯವಾಳಿಯಲ್ಲಿ ಬೆಳಗಾವಿ, ಬೀಳಗಿ, ಸೊನ್ನ, ನಾಗನೂರ, ರೊಳ್ಳಿ, ಮುಶಿಗೇರಿ ಸೇರಿದಂತೆ ನಾನಾ ಕಡೆಗಳಿಂದ 24 ತಂಡಗಳು ಭಾಗವಹಿಸಿದ್ದವು. ಬಿ.ಪಿ.ದೇಸಾಯಿ, ಶಶಿಧರ ದೇಸಾಯಿ, ಎಸ್.ಬಿ.ಮಾಚಾ, ಮುತ್ತಪ್ಪ ಮುಕ್ಕಣ್ಣವರ, ಪಿಡಿಓ ಎಲ್.ಜಿ.ಶಾಂತಗೇರಿ, ಬಾರಡ್ಡಿ, ಸಿದ್ದಪ್ಪ ಮಾವಿನಮರದ, ಪರಶುರಾಮ ಜೋಗಿನ ಸೇರಿದಂತೆ ಇತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 