ದೇಸಿ ಕ್ರೀಡೆಗಳ ಜೀವಂತಿಕೆ
ಗುಳೇದಗುಡ್ಡ 12: ಕ್ರೀಡೆಗಳು ವ್ಯಕ್ತಿಯನ್ನು ದೈಹಿಕವಾಗಿ ಸಧೃಡವಾಗಿ ಮಾಡುವುದರ ಜೊತೆಗೆ ಆರೋಗ್ಯವಂತನನ್ನಾಗಿ ಮಾಡುತ್ತವೆ. ಕಬಡ್ಡಿ ನಮ್ಮ ದೇಶಿಯ ಕ್ರೀಡೆಯಾಗಿದ್ದೂ ಗ್ರಾಮೀಣ ಭಾಗದಲ್ಲಿಯೇ ಇನ್ನೂ ದೇಶಿ ಕ್ರೀಡೆಗಳು ಜೀವಂತವಾಗಿವೆ ಎಂದು ಕೋಟೆಕಲ್ ಮಠದ ಹೊಳೆಹುಚ್ಚೇಶ್ವರ ಶ್ರೀಗಳು ಹೇಳಿದರು.
ಅವರು ಸಮೀಪದ ಕೊಟೆಕಲ್ ಗ್ರಾಮದಲ್ಲಿ ಹೊಳೆಹುಚ್ಚೇಶ್ವರ ಸಂಸ್ಥಾನಮಠದ ಜಾತ್ರಾ ಮಹೋತ್ಸವ ನಿಮಿತ್ತ ಜಾತ್ರಾ ಮಹೋತ್ಸವ ಸಮಿತಿ, ಜಿಲ್ಲಾ ಕಬಡ್ಡಿ ಅಮೇಚೂರ ಅಸೋಸಿಯೇಶನ್ ವತಿಯಿಂದ ನಡೆದ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡ ಪಂದ್ಯಾವಳಿಯಲ್ಲಿ ಸಾನಿಧ್ಯ ವಹಿಸಿ ಮಾತನಾಡಿ, ಇಂದಿನ ಯುವಕರು ಮೊಬೈಲ್ನಲ್ಲಿ ಕಳೆದು ಹೋಗುತ್ತಿದ್ದು, ಇದರಿಂದ ದೇಶಿ ಕ್ರೀಡೆಗಳ ಬಗ್ಗೆ ಆಸಕ್ತಿ ಕಳೆದುಕೊಳ್ಳುತ್ತಿದ್ದು, ಪ್ರತಿಯೊಬ್ಬರು ದೇಶಿ ಕ್ರೀಡೆಗಳನ್ನು ಬೆಳೆಸಬೇಕು ಎಂದು ಹೇಳಿದರು. ರಾಷ್ಟ್ರೀಯ ಕಬಡ್ಡಿ ಆಟಗಾರ ಹಿರೇಗೌಡರ, ಜಿಪಂ ಮಾಜಿ ಉಪಾಧ್ಯಕ್ಷ ಹನಮಂತ ಮಾವಿನಮರದ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಲಕ್ಷ್ಮಿಬಾಯಿ ಸೀತಿಮನಿ ಅಧ್ಯಕ್ಷತೆ ವಹಿಸಿದ್ದರು.
ಕಬಡ್ಡಿ ಪಂದ್ಯವಾಳಿಯಲ್ಲಿ ಬೆಳಗಾವಿ, ಬೀಳಗಿ, ಸೊನ್ನ, ನಾಗನೂರ, ರೊಳ್ಳಿ, ಮುಶಿಗೇರಿ ಸೇರಿದಂತೆ ನಾನಾ ಕಡೆಗಳಿಂದ 24 ತಂಡಗಳು ಭಾಗವಹಿಸಿದ್ದವು. ಬಿ.ಪಿ.ದೇಸಾಯಿ, ಶಶಿಧರ ದೇಸಾಯಿ, ಎಸ್.ಬಿ.ಮಾಚಾ, ಮುತ್ತಪ್ಪ ಮುಕ್ಕಣ್ಣವರ, ಪಿಡಿಓ ಎಲ್.ಜಿ.ಶಾಂತಗೇರಿ, ಬಾರಡ್ಡಿ, ಸಿದ್ದಪ್ಪ ಮಾವಿನಮರದ, ಪರಶುರಾಮ ಜೋಗಿನ ಸೇರಿದಂತೆ ಇತರರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 