ದೇವರ ಮೂರ್ತಿಗಳ ಧ್ವಂಸ ಪ್ರಕರಣ: ತನಿಖೆ ಆರಂಭ
ಕುರುಗೋಡು 09: ಪಟ್ಟಣದ ಕಂಪ್ಲಿ ರಸ್ತೆಯಲ್ಲಿನ ಕೆರೆಯ ಮುಂಬಾಗದಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮೂರು ಮೂರ್ತಿಗಳ ಧ್ವಂಸ ಪ್ರಕರಣ ಸಂಬಂದಿಸಿದ ಆರೋಪಿಗಳಿಗಾಗಿ ತೀವ್ರ ತನಿಖೆ ಆರಂಭಿಸಲಾಗಿದೆ ಎಂದು ಬಳ್ಳಾರಿ ಗ್ರಾಮೀಣ ಡಿವೈಎಸ್ಪಿ ಅರುಣ್ಕುಮಾರ್ ಜಿ.ಕೋಳೂರು ಸ್ಪಷ್ಟಪಡಿಸಿದರು.
ಅವರು ಪಟ್ಟಣದ ಪೋಲಿಸ್ ಠಾಣೆಗೆ ಭಾನುವಾರ ಬೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸೆ.3 ರಂದು ಮಂಗಳವಾರ ರಾತ್ರಿ ಕುರುಗೋಡಿನ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಗಣೆಶ್, ಅಯ್ಯಪ್ಪಸ್ವಾಮಿ ಮತ್ತು ಸುಬ್ರಮಣ್ಯ ಮೂರ್ತಿಗಳನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಪರಾರಿಯಾಗಿದ್ದರು. ದೇವಸ್ಥಾನದ ಸಮಿತಿಯವರು ಪ್ರಕರಣ ದಾಖಲಾಗಿಸಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರಿಂದ ತೀವ್ರ ತನಿಖೆ ಚುರುಕುಗೊಂಡಿದೆ ಎಂದು ತಿಳಿಸಿದ್ದಾರೆ.
ಕುರುಗೋಡು ಪೊಲೀಸರು ಪ್ರಕರಣಕ್ಕೆ ಸಂಬಂದಪಟ್ಟಂತೆ ಅನುಮಾಸ್ಪದವಾಗಿ ಕಂಡುಬಂದ ಸುಮಾರು 6 ಮಂದಿಯನ್ನು ಕರೆತಂದು ವಿಚಾರಣೆ ನಡೆಸಲಾಗಿದೆ. ಆದ್ದರಿಂದ ಆರೋಪಿಗಳನ್ನು ಯಾವುದೇ ಕಾರಣಕ್ಕೂ ಬಿಡದೇ ಪತ್ತೆ ಹಚ್ಚುತ್ತೇವೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕುರುಗೋಡು ಪಿಎಸ್ಐ ಎಂ.ಕೃಷ್ಣಮೂರ್ತಿ ಹಾಗೂ ಪೊಲೀಸ್ ಸಿಬ್ಬಂದಿಗಳು ಇದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 