ದೇವರ ಮೂರ್ತಿಗಳ ಧ್ವಂಸ ಪ್ರಕರಣ: ತನಿಖೆ ಆರಂಭ
ಕುರುಗೋಡು 09: ಪಟ್ಟಣದ ಕಂಪ್ಲಿ ರಸ್ತೆಯಲ್ಲಿನ ಕೆರೆಯ ಮುಂಬಾಗದಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮೂರು ಮೂರ್ತಿಗಳ ಧ್ವಂಸ ಪ್ರಕರಣ ಸಂಬಂದಿಸಿದ ಆರೋಪಿಗಳಿಗಾಗಿ ತೀವ್ರ ತನಿಖೆ ಆರಂಭಿಸಲಾಗಿದೆ ಎಂದು ಬಳ್ಳಾರಿ ಗ್ರಾಮೀಣ ಡಿವೈಎಸ್ಪಿ ಅರುಣ್ಕುಮಾರ್ ಜಿ.ಕೋಳೂರು ಸ್ಪಷ್ಟಪಡಿಸಿದರು.
ಅವರು ಪಟ್ಟಣದ ಪೋಲಿಸ್ ಠಾಣೆಗೆ ಭಾನುವಾರ ಬೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸೆ.3 ರಂದು ಮಂಗಳವಾರ ರಾತ್ರಿ ಕುರುಗೋಡಿನ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಗಣೆಶ್, ಅಯ್ಯಪ್ಪಸ್ವಾಮಿ ಮತ್ತು ಸುಬ್ರಮಣ್ಯ ಮೂರ್ತಿಗಳನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಪರಾರಿಯಾಗಿದ್ದರು. ದೇವಸ್ಥಾನದ ಸಮಿತಿಯವರು ಪ್ರಕರಣ ದಾಖಲಾಗಿಸಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರಿಂದ ತೀವ್ರ ತನಿಖೆ ಚುರುಕುಗೊಂಡಿದೆ ಎಂದು ತಿಳಿಸಿದ್ದಾರೆ.
ಕುರುಗೋಡು ಪೊಲೀಸರು ಪ್ರಕರಣಕ್ಕೆ ಸಂಬಂದಪಟ್ಟಂತೆ ಅನುಮಾಸ್ಪದವಾಗಿ ಕಂಡುಬಂದ ಸುಮಾರು 6 ಮಂದಿಯನ್ನು ಕರೆತಂದು ವಿಚಾರಣೆ ನಡೆಸಲಾಗಿದೆ. ಆದ್ದರಿಂದ ಆರೋಪಿಗಳನ್ನು ಯಾವುದೇ ಕಾರಣಕ್ಕೂ ಬಿಡದೇ ಪತ್ತೆ ಹಚ್ಚುತ್ತೇವೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕುರುಗೋಡು ಪಿಎಸ್ಐ ಎಂ.ಕೃಷ್ಣಮೂರ್ತಿ ಹಾಗೂ ಪೊಲೀಸ್ ಸಿಬ್ಬಂದಿಗಳು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 