ಯುವ ಪೀಳಿಗೆಯು ಅನ್ವೇಷಣಾಸಕ್ತಿ ಬೆಳೆಸಿಕೊಳ್ಳಬೇಕು: ಡಾ.ಸವಿತಾ ಸೋನಾಲಿ
The younger generation should develop a passion for exploration: Dr. Savita Sonali
ಯುವ ಪೀಳಿಗೆಯು ಅನ್ವೇಷಣಾಸಕ್ತಿ ಬೆಳೆಸಿಕೊಳ್ಳಬೇಕು: ಡಾ.ಸವಿತಾ ಸೋನಾಲಿ
ಬಳ್ಳಾರಿ 24: ಯುವ ಪೀಳಿಗೆಯು ಹೊಸ ವಿಷಯ ಪ್ರಯೋಗ ಅಥವಾ ಅನ್ವೇಷಣಾ ಮಾಡುವ ಆಸಕ್ತಿ ಆಳವಡಿಸಿಕೊಳ್ಳಬೇಕು ಎಂದು ರಾವ್ ಬಹದ್ದೂರ್ ವೈ ಮಹಾಬಲೇಶ್ವರ ಇಂಜಿನಿಯರಿಂಗ್ (ಆರ್ವೈಎಂಇಸಿ) ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ಸವಿತಾ ಸೊನಾಲಿ ಅವರು ಹೇಳಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಆರ್ಎಎಂಪಿ ಯೋಜನೆಯಡಿ ನಗರದ ಕಂಟೋನ್ಮೆಂಟ್ನ ಆರ್ವೈಎಂಇಸಿ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಇಂಕ್ಯುಬೇಶನ್ ಯೋಜನೆಯ ಬಗ್ಗೆ ಒಂದು ದಿನದ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಆರ್ವೈಎಂಇಸಿ ಕಾಲೇಜು ವತಿಯಿಂದ ಒಟ್ಟು 12 ಇಂಕ್ಯೂಬೇಶನ್ ಚಟುವಟಿಕೆಗಳ ಕುರಿತು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಾಲೇಜಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಗರಿಷ್ಟ 03 ಲಕ್ಷದಂತೆ ಪ್ರೋತ್ಸಾಹ ಪಡೆದುಕೊಂಡಿದೆ ಎಂದು ಎಂದು ತಿಳಿಸಿದರು.
ಈ ಕಾರ್ಯಗಾರದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯಮಿಗಳು ಭಾಗವಹಿಸಿ ಇಂಕ್ಯುಬೇಶನ್ ಸೌಲಭ್ಯಗಳು, ಯಶಸ್ಸಿನ ಕಥೆಗಳ ಬಗ್ಗೆ ಅರಿವು ಮೂಡಿಸಲಾಯಿತು.ಕೈಗಾರಿಕೆಯಲ್ಲಿ ಯಶಸ್ವಿ ಉದ್ದಿಮೆದಾರರು ಕೆವಿಟಿ ಕೈಗಾರಿಕೆಯ ವೀರೇಂದ್ರ ಕುಮಾರ್ ಅವರು ಪಾಲ್ಗೊಂಡು ಕೈಗಾರಿಕೆ ಪ್ರಾರಂಭಿಸುವ ಕುರಿತು ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳು, ಉದ್ದಿಮೆದಾರರೊಂದಿಗೆ ಮಾಹಿತಿ ಹಂಚಿಕೊಂಡರು.ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಸೋಮಶೇಖರ್.ಬಿ., ಆರ್ವೈಎಂಇಸಿ ಮೆಕಾನಿಕಲ್ ವಿಭಾಗದ ಮುಖ್ಯಸ್ಥ ಡಾ.ಕೋರಿ ನಾಗರಾಜ, ಅಡ್ವಕೇಟ್ ಮತ್ತು ಲೀಗಲ್ ಕೌನ್ಸಿಲ್ ಸುಜಾತ ಲಕ್ಷ್ಮೇಶ್ವರ, ಹೆಡ್ ಆಫ್ ಪೆಟೆಂಟ್ ಸೆಲ್ನ ಶರತ್ ಕುಮಾರ್,ಪಿಜಿ ಕೋ-ಆರ್ಡಿನೇಟರ್ ಚಿಟ್ರಿಕಿತೋಟಪ್ಪ, ಇಡಿಸಿ ಕೋ-ಆರ್ಡಿನೇಟರ್ ಡಾ.ಆರ್.ಎಚ್.ಎಂ.ಸೋಮನಾಥ ಸ್ವಾಮಿ, ಇಡಿಸಿ ಕೋ-ಆರ್ಡಿನೇಟರ್ ಬೆರಿಗಿ ವೀರೇಶ್ ಸೇರಿದಂತೆ ಉದ್ದಿಮೆದಾರರು, ಆರ್ವೈಎಂಇಸಿ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 