ಯುವ ಜನಾಂಗ ನಮ್ಮ ದೇಶದ ಸಂಸ್ಕೃತಿಯನ್ನು ಉಳಿಸಿ, ಬೆಳೆಸಬೇಕು: ಶಾಸಕ ಡಿ.ಎಮ್.ಐಹೊಳೆ
The youth should preserve and cultivate the culture of our country: MLA D.M. Aihole
ಲೋಕದರ್ಶನ ವರದಿ
ಯುವ ಜನಾಂಗ ನಮ್ಮ ದೇಶದ ಸಂಸ್ಕೃತಿಯನ್ನು ಉಳಿಸಿ, ಬೆಳೆಸಬೇಕು: ಶಾಸಕ ಡಿ.ಎಮ್.ಐಹೊಳೆ
ರಾಯಬಾಗ, 22: ನಮ್ಮ ಉಡುಗೆ, ತೊಡುಗೆಗಳು ನಮ್ಮ ದೇಶದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ. ಇಂದಿನ ಯುವ ಜನಾಂಗ ನಮ್ಮ ದೇಶದ ಸಂಸ್ಕೃತಿಯನ್ನು ಉಳಿಸಿ, ಬೆಳೆಸಬೇಕೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಮಂಗಳವಾರ ಪಟ್ಟಣದ ಸರ್ಕಾರ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಜಾನಪದ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗದೇ ನಮ್ಮ ಸಂಸ್ಕೃತಿಯನ್ನು ಇಡೀ ವಿಶ್ವಕ್ಕೆ ಪರಿಚಯಿಸುವ ಕೆಲಸ ಮಾಡಬೇಕಾಗಿದೆ. ಗ್ರಾಮೀಣ ಸೋಗಡಿನ ನಮ್ಮ ದೇಶವು ವೈವಿಧ್ಯಮಯತೆಯಿಂದ ಕೂಡಿದೆ ಎಂದರು.
ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಗ್ರಾಮೀಣ ಸೋಗಡಿನ ವೇಷಭೂಷಣ ತೊಟ್ಟು ಗಮನ ಸೆಳೆದರು. ಕಾಲೇಜ್ ಆವರಣದಲ್ಲಿ ನಡೆದ ಮಾದರಿ ಗ್ರಾಮೀಣ ಸಂತೆಯನ್ನು ಶಾಸಕರು ವಿಕ್ಷೀಸಿದರು.
ಜನಪದ ಕಲಾವಿದೆ ಮಾಲಾಬಾಯಿ ಸಾಂಬ್ರೆಕರ, ಪ್ರಾಚಾರ್ಯ ರಾಜಕುಮಾರ ಕಾಗೆ, ಡಾ. ಶಂಕರ ರಾಠೋಡ, ಡಾ.ಸಂತೋಷ ಮಾನೆ, ಡಾ.ವಿವೇಕಾನಂದ ಮಾನೆ, ಎಮ್.ಎಸ್.ಯಾದವಾಡೆ, ಮಾರುತಿ ಹಾಡಕರ, ಶಾನೂರ ಐಹೊಳೆ, ಡಾ.ರವಿ ಚಾಣಗಿ, ಡಾ.ಆರ್.ಎ.ಪ್ರಸಾದ, ಸಂತೋಷ ಸಮಾಜೆ, ಡಾ.ಉತ್ತಮ ಕಾಂಬಳೆ, ಜೆ.ಆರ್.ಕಿಲ್ಲೇದಾರ, ವಿಜಯಲಕ್ಷ್ಮೀ ಜಿ., ಸಿ.ಬಿ.ಕಲ್ಯಾಣಿ ಹಾಗೂ ಬೋಧಕೇತ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 