ಲೋಕದರ್ಶನ ವರದಿ ರಂಗಭೂಮಿಯ ರಸಪ್ರಸಂಗಗಳು: ವಿನೋದ ಕಾರ್ಯಕ್ರಮ ಬೆಳಗಾವಿ 8: ಹಾಸ್ಯಕೂಟ ಬೆಳಗಾವಿ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಇದೇ ದಿ. 11 ಶನಿವಾರದಂದು ಸಾಯಂಕಾಲ 4.30 ಕ್ಕೆ ನಗರದ ಚೆನ್ನಮ್ನ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ ರಂಗಭೂಮಿಯ ರಸಪ್ರಸಂಗಗಳು ಎಂಬ ಹಾಸ್ಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ನಾಡಹಬ್ಬ ಉತ್ಸವ ಸಮಿತಿಯ ಅಧ್ಯಕ್ಷಡಾ. ಎಚ್.ಬಿ. ರಾಜಶೇಖರ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದಾರೆ. ಪ್ರಾಯೋಜಕತ್ವವನ್ನು
Theater Quizzes: Fun Program
ಲೋಕದರ್ಶನ ವರದಿ ಲೋಕದರ್ಶನ ವರದಿ
ರಂಗಭೂಮಿಯ ರಸಪ್ರಸಂಗಗಳು: ವಿನೋದ ಕಾರ್ಯಕ್ರಮ
ಬೆಳಗಾವಿ 8: ಹಾಸ್ಯಕೂಟ ಬೆಳಗಾವಿ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಇದೇ ದಿ. 11 ಶನಿವಾರದಂದು ಸಾಯಂಕಾಲ 4.30 ಕ್ಕೆ ನಗರದ ಚೆನ್ನಮ್ನ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ ರಂಗಭೂಮಿಯ ರಸಪ್ರಸಂಗಗಳು ಎಂಬ ಹಾಸ್ಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ನಾಡಹಬ್ಬ ಉತ್ಸವ ಸಮಿತಿಯ ಅಧ್ಯಕ್ಷಡಾ. ಎಚ್.ಬಿ. ರಾಜಶೇಖರ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದಾರೆ. ಪ್ರಾಯೋಜಕತ್ವವನ್ನು ರಂಗಸಂಪದದ ಅಧ್ಯಕ್ಷ, ನಟ, ನಿರ್ದೇಶಕ ಡಾ. ಅರವಿಂದ ಕುಲಕರ್ಣಿಯವರು ವಹಿಸಿಕೊಂಡಿದ್ದು ಪ್ರಾಸ್ತಾವಿಕ ನುಡಿಯನ್ನು ಹಾಸ್ಯಕೂಟ ಸಂಚಾಲಕ ಗುಂಡೇನಟ್ಟಿ ಮಧುಕರ ಆಡಲಿದ್ದಾರೆ.
ರಂಗಭೂಮಿ ರಸಪ್ರಸಂಗಗಳನ್ನು ನಟ ನಿರ್ದೇಶಕ ಶೀರೀಷ ಜೋಶಿ, ಉಮೇಶ ಬಡಿಗೇರ ಅಲ್ಲದೇ ಕಲಾವಿದರಾದ ಪದ್ಮಾ ಕುಲಕರ್ಣಿ, ಪವಿತ್ರಾ ರೇವಣಕರ, ರಾಮಚಂದ್ರ ಭಟ್ಟ ಹಂಚಿಕೊಳ್ಳಲಿದ್ದಾರೆ. ಹಾಸ್ಯಕೂಟ ಕಲಾವಿದ ಅರವಿಂದ ಹುನಗುಂದ ನಿರೂಪಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಹಾಸ್ಯಾಸಕ್ತರು ಆಗಮಿಸುವಂತೆ ಸಾಹಿತ್ಯ ಭವನದ ಗೌರವ ಕಾರ್ಯದರ್ಶಿ ರಾಮಚಂದ್ರ ಕಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 