ಲೋಕದರ್ಶನ ವರದಿ ರಂಗಭೂಮಿಯ ರಸಪ್ರಸಂಗಗಳು: ವಿನೋದ ಕಾರ್ಯಕ್ರಮ ಬೆಳಗಾವಿ 8: ಹಾಸ್ಯಕೂಟ ಬೆಳಗಾವಿ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಇದೇ ದಿ. 11 ಶನಿವಾರದಂದು ಸಾಯಂಕಾಲ 4.30 ಕ್ಕೆ ನಗರದ ಚೆನ್ನಮ್ನ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ ರಂಗಭೂಮಿಯ ರಸಪ್ರಸಂಗಗಳು ಎಂಬ ಹಾಸ್ಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ನಾಡಹಬ್ಬ ಉತ್ಸವ ಸಮಿತಿಯ ಅಧ್ಯಕ್ಷಡಾ. ಎಚ್.ಬಿ. ರಾಜಶೇಖರ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದಾರೆ. ಪ್ರಾಯೋಜಕತ್ವವನ್ನು
Theater Quizzes: Fun Program
ಲೋಕದರ್ಶನ ವರದಿ ಲೋಕದರ್ಶನ ವರದಿ
ರಂಗಭೂಮಿಯ ರಸಪ್ರಸಂಗಗಳು: ವಿನೋದ ಕಾರ್ಯಕ್ರಮ
ಬೆಳಗಾವಿ 8: ಹಾಸ್ಯಕೂಟ ಬೆಳಗಾವಿ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಇದೇ ದಿ. 11 ಶನಿವಾರದಂದು ಸಾಯಂಕಾಲ 4.30 ಕ್ಕೆ ನಗರದ ಚೆನ್ನಮ್ನ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ ರಂಗಭೂಮಿಯ ರಸಪ್ರಸಂಗಗಳು ಎಂಬ ಹಾಸ್ಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ನಾಡಹಬ್ಬ ಉತ್ಸವ ಸಮಿತಿಯ ಅಧ್ಯಕ್ಷಡಾ. ಎಚ್.ಬಿ. ರಾಜಶೇಖರ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದಾರೆ. ಪ್ರಾಯೋಜಕತ್ವವನ್ನು ರಂಗಸಂಪದದ ಅಧ್ಯಕ್ಷ, ನಟ, ನಿರ್ದೇಶಕ ಡಾ. ಅರವಿಂದ ಕುಲಕರ್ಣಿಯವರು ವಹಿಸಿಕೊಂಡಿದ್ದು ಪ್ರಾಸ್ತಾವಿಕ ನುಡಿಯನ್ನು ಹಾಸ್ಯಕೂಟ ಸಂಚಾಲಕ ಗುಂಡೇನಟ್ಟಿ ಮಧುಕರ ಆಡಲಿದ್ದಾರೆ.
ರಂಗಭೂಮಿ ರಸಪ್ರಸಂಗಗಳನ್ನು ನಟ ನಿರ್ದೇಶಕ ಶೀರೀಷ ಜೋಶಿ, ಉಮೇಶ ಬಡಿಗೇರ ಅಲ್ಲದೇ ಕಲಾವಿದರಾದ ಪದ್ಮಾ ಕುಲಕರ್ಣಿ, ಪವಿತ್ರಾ ರೇವಣಕರ, ರಾಮಚಂದ್ರ ಭಟ್ಟ ಹಂಚಿಕೊಳ್ಳಲಿದ್ದಾರೆ. ಹಾಸ್ಯಕೂಟ ಕಲಾವಿದ ಅರವಿಂದ ಹುನಗುಂದ ನಿರೂಪಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಹಾಸ್ಯಾಸಕ್ತರು ಆಗಮಿಸುವಂತೆ ಸಾಹಿತ್ಯ ಭವನದ ಗೌರವ ಕಾರ್ಯದರ್ಶಿ ರಾಮಚಂದ್ರ ಕಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 