ಶಿಕ್ಷಕನ ಮನೆಯಲ್ಲಿ ಕಳ್ಳತನ
Theft at teacher's house: Karwar News
ಕಾರವಾರ 15: ಶಾಲೆಗೆ ತೆರಳಿದ್ದ ಶಿಕ್ಷಕನ ಮನೆಗೆ ನುಗ್ಗಿದ ಕಳ್ಳರು ಹಣ ದೋಚಿದ ಘಟನೆ ಕಾರವಾರ ತಾಲೂಕಿನ ಸದಾಶಿವಗಡದ ಚಿಂಚೆವಾಡಾದಲ್ಲಿ ನಡೆದಿದೆ. ಮನೆ ಕಳ್ಳತನವಾಗಿದೆ ಎಂದು ಸುನೀಲ ರಾಮಚಂದ್ರ ಗಾಂವಕರ್ ಠಾಣೆಗೆ ದೂರು ನೀಡಿದ್ದಾರೆ. ಫೆ.13 ರ ಬೆಳಗ್ಗೆ 9.15 ರ ಸುಮಾರಿಗೆ ಮನೆಯ ಮುಖ್ಯ ಬಾಗಿಲಿಗೆ ಬೀಗ ಹಾಕಿ ಶಾಲೆಗೆ ತೆರಳಿದ್ದರು.
ಚಿಂಚೆವಾಡಾದಲ್ಲಿರುವ ಅಮೃತಾ ವಿದ್ಯಾಲಯ ಹೈಸ್ಕೂಲಿಗೆ ಹೋಗಿದ್ದ ಮಗಳು , ಸಾಯಂಕಲ ನಾಲ್ಕು ಗಂಟೆಗೆ ಮನೆಗೆ ಬಂದು ನೋಡಿದಾಗ ಮನೆ ಕಳ್ಳತನವಾಗಿದ್ದು ಬೆಳಕಿಗೆ ಬಂದಿದೆ. ಸಿದ್ದರದ ಮಲ್ಲಿಕಾರ್ಜುನ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ಕಳ್ಳರು ಮನೆಯ ಮುಖ್ಯ ಬಾಗಿಲಿಗೆ ಹಾಕಿದ್ದ ಬೀಗದ ಕೊಂಡಿಯನ್ನು ಮುರಿದು, ಒಳಹೊಕ್ಕಿ ಮನೆಯ ಬೆಡ್ ರೂಮ್ನಲ್ಲಿದ್ದ ಕಟ್ಟಿಗೆಯ ಕಪಾಟು ಮತ್ತು ಚಾವಿ ಹಾಕಿದ ಕಬ್ಬಿಣದ ಕಪಾಟನ್ನು ಮುರಿದು ಅದರಲ್ಲಿದ್ದ ಸಾವಿರಾರು ರೂಪಾಯಿಗಳನ್ನು ಕದ್ದಿದ್ದಾರೆ. ಚಿತ್ತಾಕುಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ಕೈಗೊಂಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 