ಶಿಕ್ಷಕನ ಮನೆಯಲ್ಲಿ ಕಳ್ಳತನ
Theft at teacher's house: Karwar News
ಕಾರವಾರ 15: ಶಾಲೆಗೆ ತೆರಳಿದ್ದ ಶಿಕ್ಷಕನ ಮನೆಗೆ ನುಗ್ಗಿದ ಕಳ್ಳರು ಹಣ ದೋಚಿದ ಘಟನೆ ಕಾರವಾರ ತಾಲೂಕಿನ ಸದಾಶಿವಗಡದ ಚಿಂಚೆವಾಡಾದಲ್ಲಿ ನಡೆದಿದೆ. ಮನೆ ಕಳ್ಳತನವಾಗಿದೆ ಎಂದು ಸುನೀಲ ರಾಮಚಂದ್ರ ಗಾಂವಕರ್ ಠಾಣೆಗೆ ದೂರು ನೀಡಿದ್ದಾರೆ. ಫೆ.13 ರ ಬೆಳಗ್ಗೆ 9.15 ರ ಸುಮಾರಿಗೆ ಮನೆಯ ಮುಖ್ಯ ಬಾಗಿಲಿಗೆ ಬೀಗ ಹಾಕಿ ಶಾಲೆಗೆ ತೆರಳಿದ್ದರು.
ಚಿಂಚೆವಾಡಾದಲ್ಲಿರುವ ಅಮೃತಾ ವಿದ್ಯಾಲಯ ಹೈಸ್ಕೂಲಿಗೆ ಹೋಗಿದ್ದ ಮಗಳು , ಸಾಯಂಕಲ ನಾಲ್ಕು ಗಂಟೆಗೆ ಮನೆಗೆ ಬಂದು ನೋಡಿದಾಗ ಮನೆ ಕಳ್ಳತನವಾಗಿದ್ದು ಬೆಳಕಿಗೆ ಬಂದಿದೆ. ಸಿದ್ದರದ ಮಲ್ಲಿಕಾರ್ಜುನ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ಕಳ್ಳರು ಮನೆಯ ಮುಖ್ಯ ಬಾಗಿಲಿಗೆ ಹಾಕಿದ್ದ ಬೀಗದ ಕೊಂಡಿಯನ್ನು ಮುರಿದು, ಒಳಹೊಕ್ಕಿ ಮನೆಯ ಬೆಡ್ ರೂಮ್ನಲ್ಲಿದ್ದ ಕಟ್ಟಿಗೆಯ ಕಪಾಟು ಮತ್ತು ಚಾವಿ ಹಾಕಿದ ಕಬ್ಬಿಣದ ಕಪಾಟನ್ನು ಮುರಿದು ಅದರಲ್ಲಿದ್ದ ಸಾವಿರಾರು ರೂಪಾಯಿಗಳನ್ನು ಕದ್ದಿದ್ದಾರೆ. ಚಿತ್ತಾಕುಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ಕೈಗೊಂಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 