25 ಜನ ಸಂಸದರಿದ್ದರು, ಜನ ಬೀದಿಗೆ ಬಂದಿದ್ದಾರೆ: ಸೌಮ್ಯ ರೆಡ್ಡಿ ಕಿಡಿ
ಧಾರವಾಡ, ಅ 4: ರಾಜ್ಯದಲ್ಲಿ 25 ಜನ ಸಂಸದರಿದ್ದರು, ನೆರೆ ಪರಿಹಾರ ಸಿಗದೇ ಜನ ಬೀದಿಗೆ ಬಂದಿದ್ದಾರೆ ಎಂದು ಶಾಸಕಿ ಸೌಮ್ಯ ರೆಡ್ಡಿ ಸಕರ್ಾರದ ವಿರುದ್ಧ ಕಿಡಿಕಾರಿದ್ದಾರೆ.ನೆರೆ ಪರಿಹಾರ ವಿಳಂಬದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉಂಟಾದ ಭೀಕರ ಪ್ರವಾಹದಿಂದ ನಾನು ಬಹಳ ನೊಂದಿದ್ದೇನೆ. ಇಂತಹ ಪ್ರವಾಹ ಶತಮಾನದಲ್ಲಿ ಆಗಿರಲಿಲ್ಲ. ಅನುದಾನ ಬಿಡುಗಡೆಗಾಗಿ ನಾವು ಸಾಕಷ್ಟು ಪ್ರತಿಭಟನೆ ಮಾಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದೇವೆ ಎಂದರು.
ಬಿಜೆಪಿ ಸರ್ಕಾರ ಜನಪರ ಕಾಳಜಿ ಹೊಂದಿದ್ದು, ಕೇಂದ್ರ ಸರ್ಕಾರದಿಂದ ಶೀಘ್ರ ಪರಿಹಾರ ತರುವ ವಿಶ್ವಾಸವಿದೆ. ನಮ್ಮ ಕಡೆಯಿಂದ ಎಷ್ಟು ಸಾಧ್ಯವೋ, ಅಷ್ಟು ಸಹಾಯ ಮಾಡಿದ್ದೇವೆ. ಈಗ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮೇಲೆ ಆ ಜವಾಬ್ದಾರಿ ಇದೆ ಎಂದರು.
ಈಗಾಗಲೇ ನೆರೆ ಸಂತ್ರಸ್ಥರಿಗೆ ಪರಿಹಾರ ದೊರೆಯಬೇಕು ಎಂದು ಪ್ರತಿಭಟನೆ ಆರಂಭವಾಗಿದ್ದು, ಅನುದಾನ ಸಿಗುವವರೆಗೂ ನಾವು ಸುಮ್ಮನಿರುವುದಿಲ್ಲ ಎಂದು ಅವರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 