25 ಜನ ಸಂಸದರಿದ್ದರು, ಜನ ಬೀದಿಗೆ ಬಂದಿದ್ದಾರೆ: ಸೌಮ್ಯ ರೆಡ್ಡಿ ಕಿಡಿ
ಧಾರವಾಡ, ಅ 4: ರಾಜ್ಯದಲ್ಲಿ 25 ಜನ ಸಂಸದರಿದ್ದರು, ನೆರೆ ಪರಿಹಾರ ಸಿಗದೇ ಜನ ಬೀದಿಗೆ ಬಂದಿದ್ದಾರೆ ಎಂದು ಶಾಸಕಿ ಸೌಮ್ಯ ರೆಡ್ಡಿ ಸಕರ್ಾರದ ವಿರುದ್ಧ ಕಿಡಿಕಾರಿದ್ದಾರೆ.ನೆರೆ ಪರಿಹಾರ ವಿಳಂಬದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉಂಟಾದ ಭೀಕರ ಪ್ರವಾಹದಿಂದ ನಾನು ಬಹಳ ನೊಂದಿದ್ದೇನೆ. ಇಂತಹ ಪ್ರವಾಹ ಶತಮಾನದಲ್ಲಿ ಆಗಿರಲಿಲ್ಲ. ಅನುದಾನ ಬಿಡುಗಡೆಗಾಗಿ ನಾವು ಸಾಕಷ್ಟು ಪ್ರತಿಭಟನೆ ಮಾಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದೇವೆ ಎಂದರು.
ಬಿಜೆಪಿ ಸರ್ಕಾರ ಜನಪರ ಕಾಳಜಿ ಹೊಂದಿದ್ದು, ಕೇಂದ್ರ ಸರ್ಕಾರದಿಂದ ಶೀಘ್ರ ಪರಿಹಾರ ತರುವ ವಿಶ್ವಾಸವಿದೆ. ನಮ್ಮ ಕಡೆಯಿಂದ ಎಷ್ಟು ಸಾಧ್ಯವೋ, ಅಷ್ಟು ಸಹಾಯ ಮಾಡಿದ್ದೇವೆ. ಈಗ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮೇಲೆ ಆ ಜವಾಬ್ದಾರಿ ಇದೆ ಎಂದರು.
ಈಗಾಗಲೇ ನೆರೆ ಸಂತ್ರಸ್ಥರಿಗೆ ಪರಿಹಾರ ದೊರೆಯಬೇಕು ಎಂದು ಪ್ರತಿಭಟನೆ ಆರಂಭವಾಗಿದ್ದು, ಅನುದಾನ ಸಿಗುವವರೆಗೂ ನಾವು ಸುಮ್ಮನಿರುವುದಿಲ್ಲ ಎಂದು ಅವರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 