ದಶ ದಿಕ್ಕುಗಳಲ್ಲೂ ವೀರಭದ್ರಸ್ವಾಮಿ ದೇವಾಲಯಗಳಿವೆ: ಈರಯ್ಯ ಹಿರೇಮಠ
There are Veerabhadra Swamy temples in all ten directions: Irayya Hiremath
ಬೆಟಗೇರಿ, 26 : ಅಧರ್ಮದ ನಾಶಕ್ಕಾಗಿ ಹಾಗೂ ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು ಎಂದು ಬೆಟಗೇರಿ ಗ್ರಾಮದ ವೇದಮೂರ್ತಿ ಈರಯ್ಯ ಹಿರೇಮಠ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಆ.26ರಂದು ನಡೆದ ವೀರಭದ್ರೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿ, ಎಲ್ಲ ಜಾತಿಜನಾಂಗದವರು ವೀರಭದ್ರನನ್ನು ಪೂಜಿಸಿದ ಇತಿಹಾಸವಿದೆ. ದೇಶದ ದಶ ದಿಕ್ಕುಗಳಲ್ಲೂ ವೀರಭದ್ರಸ್ವಾಮಿ ದೇವಾಲಯಗಳು ಕಾಣುತ್ತವೆ. ಶಿವನು ಸೃಷ್ಟಿಸಿದ ಗಣಾಧೀಶ್ವರರಲ್ಲಿ ವೀರಭದ್ರೇಶ್ವರನೂ ಓರ್ವನಾಗಿದ್ದಾನೆ ಎಂದರು.
ಸ್ಥಳೀಯ ವೀರಭದ್ರೇಶ್ವರ ದೇವಸ್ಥಾನದ ಅರ್ಚಕ ಸಂಗಯ್ಯ ಹಿರೇಮಠ ಸಮ್ಮುಖ ವಹಿಸಿದ್ದರು. ಇಲ್ಲಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿರುವ ವೀರಭದ್ರೇಶ್ವರರ ಗದ್ಗುಗೆಗೆ ರುದ್ರಾಭಿಷೇಕ ಮತ್ತು ಭಾವಚಿತ್ರಕ್ಕೆ ಮಹಾಪೂಜೆ, ಸುಮಂಗಲೆಯರಿಂದ ನೈವೇದ್ಯ ಸಮರೆ್ನ, ದೀಪೋತ್ಸವ, ಪುರವಂತರಿಂದ ಒಡಪು ಹೇಳುವದು, ಮಹಾಮಂಗಲ, ಮಹಾಪ್ರಸಾದ ನಡೆಯಿತು.
ಹರ, ಗುರು, ಚರಮೂರ್ತಿಗಳು, ಗಣ್ಯರು, ವೀರಭದ್ರಸ್ವಾಮಿ ಪುರವಂತರು, ಭಕ್ತರು, ಮಹಿಳೆಯರು, ವೀರಭದ್ರೇಶ್ವರ ಜಯಂತ್ಯೋತ್ಸವ ಸೇವಾ ಸಮಿತಿ, ಗಜಾನನ ಯುವಕ ಮಂಡಳಿ ಅಧ್ಯಕ್ಷರು, ಸದಸ್ಯರು, ಎಲ್ಲ ಸಮುದಾಯದ ಹಿರಿಯ ನಾಗರಿಕರು, ಗ್ರಾಮಸ್ಥರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 