ಪತ್ರಿಕೋದ್ಯಮದಲ್ಲಿ ಹಲವಾರು ವೃತ್ತಿ ಅವಕಾಶಗಳಿವೆ: ಹಿರೇಮಠ
ಲೋಕದರ್ಶನವರದಿ
ಮಹಾಲಿಂಗಪುರ೨೮: ಪತ್ರಿಕೋದ್ಯಮದಲ್ಲಿ ಹಲವಾರು ವೃತ್ತಿ ಅವಕಾಶಗಳಿದ್ದು, ಧೈರ್ಯ, ಜ್ಞಾನ, ವೇಗವಾಗಿ ಕೆಲಸ ಮಾಡುವ ಆಸಕ್ತಿಯನ್ನು ಪತ್ರಿಕೋದ್ಯಮ ವಿದ್ಯಾಥರ್ಿಗಳು ಹೊಂದಿರಬೇಕು ಎಂದು ಪತ್ರಕರ್ತ ಚಂದ್ರು ಹಿರೇಮಠ ಹೇಳಿದರು.
ಸ್ಥಳೀಯ ಕೆ.ಎಲ್.ಇ ಸಂಸ್ಥೆಯ ಎಸ್.ಸಿ.ಪಿ ಕಲಾ, ವಿಜ್ಞಾನ ಹಾಗೂ ಡಿ.ಡಿ.ಎಸ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ದಿನಪತ್ರಿಕೆಗಳಲ್ಲಿ ವರದಿಗಾರಿಕೆಯ ವಿಭಾಗ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನೀಡಿದರು.
ಪತ್ರಕರ್ತ ನೇರ, ನಿಖರ, ಸ್ಪಷ್ಟವಾಗಿ ಜನರಿಗೆ ಮನವರಿಕೆಯಾಗುವ ಹಾಗೆ ಸುದ್ದಿಯನ್ನು ಓದುವರಿಗೆ ತಲುಪಿಸಬೇಕು. ಪತ್ರಕರ್ತ ಯಾವುದೇ ಗೊಂದಲಕ್ಕೆ, ಆಸೆ-ಆಮಿಷಗಳಿಗೆ ಒಳಗಾಗದೇ ಪ್ರಾಮಾಣಿಕನಾಗಿರಬೇಕು ಎಂದರು.
ಈ ಸಂದರ್ಭದಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ವಿರುಪಾಕ್ಷ ಅಡಹಳ್ಳಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಪೂಜಾ ಕಲ್ಯಾಣಶೆಟ್ಟಿ, ಇತಿಹಾಸ ಉಪನ್ಯಾಸಕ ಟಿ.ಡಿ.ಡಂಗಿ ಹಲವರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 