ಅವಕಾಶ ಬಳಸಿಕೊಂಡ ಖುಷಿ ಇದೆ: ಉಮೇಶ್
ಪುಣೆ, ಅ. 13: ಭಾರತ ತಂಡದ ವೇಗಿ ಜಸ್ಪ್ರಿತ್ ಬುಮ್ರಾ ಅವರು ಗಾಯದಿಂದ ಬಳಲುತ್ತಿದ್ದು, ಅವರ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ಉಮೇಶ್ ಯಾದವ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.
ಇಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 137 ರನ್ ಗಳಿಂದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿತು. ಅಲ್ಲದೆ ಮೂರು ಪಂದ್ಯಗಳ ಸರಣಿಯನ್ನು, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ ವಶಕ್ಕೆ ಪಡೆದುಕೊಂಡಿದೆ. ಮೊದಲ ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ ತಲಾ ಮೂರು ವಿಕೆಟ್ ಪಡೆದಿರುವ ಉಮೇಶ್ ಅಬ್ಬರಿಸಿದ್ದಾರೆ.
ಪಂದ್ಯದ ಬಳಿಕ ಮಾತನಾಡಿದ ಉಮೇಶ್, "ವೇಗದ ಬೌಲರ್ಗಳಲ್ಲಿ ತಂಡದಲ್ಲಿ ಸಾಕಷ್ಟು ಸ್ಪರ್ದೆ ಇದೆ. ಸಿಕ್ಕ ಅವಕಾಶವನ್ನು ಬಳಿಸಿಕೊಳ್ಳುವುದನ್ನು ಅರಿತಿದ್ದೇ. ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅದ್ಭುತ್ ಕೀಪಿಂಗ್ ಮಾಡಿದ್ದಾರೆ. ನನಗೆ ಲಭಿಸಿದ ವಿಕೆಟ್ ಗಳ ಶ್ರೇಯ ಅವರಿಗೂ ಸಲ್ಲುತ್ತದೆ' ಎಂದಿದ್ದಾರೆ.
ನಾನು ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ ಉತ್ತಮ ಪ್ರದರ್ಶನ ನೀಡಿದ್ದೆ. ಅಲ್ಲದೆ ಭಾರತದ ಪಿಚ್ ಗಳಲ್ಲಿ ಬೌಲಿಂಗ್ ಮಾಡುವ ಮರ್ಮ ಗೊತ್ತು. ವಿಕೆಟ್ ಪಡೆಯಲು ಮಾಡಿಕೊಂಡ ಯೋಜನೆಗಳೆಲ್ಲಾ ಫಲಿಸಿವೆ ಎಂದು ಹೇಳಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 