ಅವಕಾಶ ಬಳಸಿಕೊಂಡ ಖುಷಿ ಇದೆ: ಉಮೇಶ್
ಪುಣೆ, ಅ. 13: ಭಾರತ ತಂಡದ ವೇಗಿ ಜಸ್ಪ್ರಿತ್ ಬುಮ್ರಾ ಅವರು ಗಾಯದಿಂದ ಬಳಲುತ್ತಿದ್ದು, ಅವರ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ಉಮೇಶ್ ಯಾದವ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.
ಇಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 137 ರನ್ ಗಳಿಂದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿತು. ಅಲ್ಲದೆ ಮೂರು ಪಂದ್ಯಗಳ ಸರಣಿಯನ್ನು, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ ವಶಕ್ಕೆ ಪಡೆದುಕೊಂಡಿದೆ. ಮೊದಲ ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ ತಲಾ ಮೂರು ವಿಕೆಟ್ ಪಡೆದಿರುವ ಉಮೇಶ್ ಅಬ್ಬರಿಸಿದ್ದಾರೆ.
ಪಂದ್ಯದ ಬಳಿಕ ಮಾತನಾಡಿದ ಉಮೇಶ್, "ವೇಗದ ಬೌಲರ್ಗಳಲ್ಲಿ ತಂಡದಲ್ಲಿ ಸಾಕಷ್ಟು ಸ್ಪರ್ದೆ ಇದೆ. ಸಿಕ್ಕ ಅವಕಾಶವನ್ನು ಬಳಿಸಿಕೊಳ್ಳುವುದನ್ನು ಅರಿತಿದ್ದೇ. ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅದ್ಭುತ್ ಕೀಪಿಂಗ್ ಮಾಡಿದ್ದಾರೆ. ನನಗೆ ಲಭಿಸಿದ ವಿಕೆಟ್ ಗಳ ಶ್ರೇಯ ಅವರಿಗೂ ಸಲ್ಲುತ್ತದೆ' ಎಂದಿದ್ದಾರೆ.
ನಾನು ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ ಉತ್ತಮ ಪ್ರದರ್ಶನ ನೀಡಿದ್ದೆ. ಅಲ್ಲದೆ ಭಾರತದ ಪಿಚ್ ಗಳಲ್ಲಿ ಬೌಲಿಂಗ್ ಮಾಡುವ ಮರ್ಮ ಗೊತ್ತು. ವಿಕೆಟ್ ಪಡೆಯಲು ಮಾಡಿಕೊಂಡ ಯೋಜನೆಗಳೆಲ್ಲಾ ಫಲಿಸಿವೆ ಎಂದು ಹೇಳಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 