ಅನರ್ಹರನ್ನು ಬಚಾವ್ ಮಾಡಲು ಯಡಿಯೂರಪ್ಪ ಬಳಿ ಸಮಯವಿದೆ : ಎಚ್ ಡಿ ಕುಮಾರಸ್ವಾಮಿ ಲೇವಡಿ
ಬೆಂಗಳೂರು, ಸೆ 22 ರಾಜ್ಯದ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಬಗ್ಗೆ ದೆಹಲಿ ನಾಯಕರ ಜೊತೆ ಮಾತನಾಡಲು ಯಡಿಯೂರಪ್ಪ ಅವರಿಗೆ ಸಮಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅನರ್ಹ ಶಾಸಕರ ಜೊತೆ ರಹಸ್ಯ ಸಭೆ ನಡೆಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಿದ್ದು ಸಂತ್ರಸ್ತರಿಗೆ ಬದುಕು ಕಟ್ಟಿಕೊಡುವ ಬಗ್ಗೆಕೇಂದ್ರದ ಮೇಲೆ ಒತ್ತಡ ಹೇರಲು ಅವರ ಬಳಿ ಸಮಯಾವಕಾಶವೇ ಇಲ್ಲ ಎಂದು ಲೇವಡಿ ಮಾಡಿದ್ದಾರೆ.
ಆದರೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಪ್ರಭಾವ ಬಳಸಿ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್ ಕಮಲದ ಸಂತ್ರಸ್ತ ಅನರ್ಹರನ್ನು ಬಚಾವ್ ಮಾಡಿಸಲು ದೆಹಲಿಗೆ ತೆರಳಲು ಯಡಿಯೂರಪ್ಪನವರಿಗೆ ಸಾಕಷ್ಟು ಸಮಯವಿದೆ ಎಂದು ಕುಮರಸ್ವಾಮಿ ಟ್ವೀಟ್ ಮೂಲಕ ಯಡಿಯೂರಪ್ಪ ಅವರ ಕಾಲೆಳೆದಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 