ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಇಲ್ಲ-ಜಿಲ್ಲಾಧಿಕಾರಿ ಡಾ. ಆನಂದ ಕೆ. ಸ್ಪಷ್ಟನೆ

ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಇಲ್ಲ-ಜಿಲ್ಲಾಧಿಕಾರಿ ಡಾ. ಆನಂದ ಕೆ. ಸ್ಪಷ್ಟನೆ There is no drinking water problem in the entire district - District Magistrate Dr. Anand K. clarifi

ಲೋಕದರ್ಶನ ವರದಿ 

ವಿಜಯಪುರ 9: ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆ ಹಾಗೂ ಕುಡಿಯುವ ನೀರಿಗೆ ಅನುದಾನದ ಕೊರತೆಯಿಲ್ಲ. ಅದರಂತೆ, ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಲ್ಬಣಿಸಬಹುದಾದ 11 ತಾಲೂಕುಗಳ 38 ಗ್ರಾಮ ಪಂಚಾಯತಿ ವ್ಯಾಪ್ತಿಯ 65 ಗ್ರಾಮಗಳನ್ನು ಗುರುತಿಸಲಾಗಿದೆ.  ಅವುಗಳಲ್ಲಿ ನೀರಿನ ಯಾವುದೇ ಸಮಸ್ಯೆ ಉಂಟಾಗದಂತೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಏ.9ರ ಇದೇ ದಿನ ಆಲಮಟ್ಟಿ ಜಲಾಶಯದಲ್ಲಿ ಕಳೆದ ವರ್ಷ 29.712 ಟಿಎಂಸಿ ನೀರಿತ್ತು, ಪ್ರಸ್ತುತ 34.895 ಟಿಎಂಸಿ ಅಂದರೆ ಅಂದಾಜು 5.183 ಟಿಎಂಸಿ ನೀರು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದೆ ತಿಳಿಸಿದರು. ನಾರಾಯಣಪುರ ಜಲಾಶಯದಲ್ಲಿ ಕಳೆದ ವರ್ಷ  19.595 ಟಿಎಂಸಿ, ಪ್ರಸ್ತುತ 21.269  ಟಿಎಂಸಿ ಅಂದರೆ ಅಂದಾಜು 1.674 ಟಿಎಂಸಿ ನೀರು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದೆ. ಜಿಲ್ಲೆಯ ಬೇಡಿಕೆಯಂತೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಇಂಡಿ ತಾಲೂಕಿನ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಲುವಾಗಿ ಇಂಡಿ ಶಾಖಾ ಕಾಲುವೆಯಿಂದ 1.00 ಟಿಎಂಸಿ ನೀರನ್ನು ಏ. 11 ರಿಂದ ಏ. 23 ರವರೆಗೆ (12 ದಿನಗಳು) ನಿತ್ಯ ಒಂದು ಸಾವಿರ ಕ್ಯೂಸೆಕ್ ನಂತೆ ಹರಿಸಲು ಆದೇಶಿಸಲಾಗಿದೆ ಎಂದರು.