ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಉದ್ದೇಶವಿಲ್ಲ: ಪಿಯೂಶ್ ಗೋಯಲ್
ನವದೆಹಲಿ, ನ.22 : ರೈಲ್ವೆಯನ್ನು ಖಾಸಗೀಕರಣಗೊಳಿಸಲು ಸಕರ್ಾರ ಪ್ರಯತ್ನಿಸುತ್ತಿದೆ ಎಂಬ ವರದಿಯನ್ನು ತಳ್ಳಿಹಾಕಿರುವ ರೈಲ್ವೆ ಖಾತೆ ಸಚಿವ ಪಿಯೂಶ್ ಗೋಯಲ್ ಶುಕ್ರವಾರ, ಭಾರತೀಯ ರೈಲ್ವೆ ಯಾವಾಗಲೂ ಭಾರತದ ಜನರ ಆಸ್ತಿಯಾಗಿದೆ ಮತ್ತು ಆಸ್ತಿಯಾಗಿಯೇ ಉಳಿಯಲಿದೆ ಎಂದು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿದ ಗೋಯಲ್, ಎಲ್ಲಾ ರಾಜ್ಯಗಳ ಜನರು ತಮ್ಮ ಪ್ರದೇಶದಲ್ಲಿ ರೈಲ್ವೆ ಮಾರ್ಗದ ಬೇಡಿಕೆಯೊಂದಿಗೆ ನಮ್ಮ ಬಳಿಗೆ ಬರುತ್ತಿದ್ದು, ಇವುಗಳನ್ನು ಪೂರೈಸಲು ರೈಲ್ವೆಗೆ 50 ಲಕ್ಷ ಕೋಟಿ ರೂ.ಅಗತ್ಯವಿದೆ ಎಂದು ಹೇಳಿದರು.
ಆದ್ದರಿಂದ ಈ ಎಲ್ಲ ಬೇಡಿಕೆಗಳನ್ನು ಈಡೇರಿಸಲು, ಸ್ವಚ್ಛತೆಯ ಮಾನದಂಡಗಳನ್ನು ಪೂರೈಸಲು, ಹೊಸ ಸವಾಲುಗಳನ್ನು ಎದುರಿಸಲು, ಹೊರಗುತ್ತಿಗೆ ಇರುವ ಸೇವೆಗಳಲ್ಲಿ ಉತ್ತಮ ಸೇವೆಗಳನ್ನು ನೀಡಬೇಕಾಗಿದೆ. ರೈಲ್ವೆ ಭಾರತದ ಜನರ ಆಸ್ತಿಯಾಗಿ ಉಳಿಯಲಿದೆ ಎಂದು ಸಚಿವರು ಒತ್ತಿ ಹೇಳಿದರು.
ಆದಾಗ್ಯೂ, ಕೆಲವು ರೈಲುಗಳ ವಾಣಿಜ್ಯ ಮತ್ತು ಮಂಡಳಿ ಸೇವೆಗಳನ್ನು ಹೊರಗುತ್ತಿಗೆ ನೀಡುವ ಪ್ರಸ್ತಾಪವಿದೆ. ಪ್ರಯಾಣಿಕರಿಗೆ ಸುಧಾರಿತ ಸೇವೆಯನ್ನು ನೀಡುವ ಉದ್ದೇಶದಿಂದ ಆಯ್ದ ಮಾರ್ಗಗಳಲ್ಲಿ ರೈಲುಗಳನ್ನು ಓಡಿಸಲು ಖಾಸಗಿ ರೇಕ್ಗಳಿಗೆ ಆಧುನಿಕ ರೇಕ್ಗಳನ್ನು ಸೇರಿಸಲು ಅನುಮತಿ ನೀಡಲು ಪ್ರಸ್ತಾಪವಿದೆ ಎಂದರು.
ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಮಾತನಾಡಿ, ರೈಲ್ವೆ ಇಲಾಖೆಯ ಹಿತಾಸಕ್ತಿಯನ್ನು ಸಕರ್ಾರ ಕಾಪಾಡಲಿದೆ. ನಾವು ಖಾಸಗೀಕರಣ ಮಾಡುವುದಿಲ್ಲ. ಇದು ನಿಗಮ ಮಾತ್ರವಾಗಿದ್ದು, ಈಗಾಗಲೇ ಉದ್ಯೋಗದಲ್ಲಿರುವ ಜನರ ಕೆಲಸಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರೈಲ್ವೆ ಹಳಿಗಳಲ್ಲಿನ ಅಪಘಾತಗಳ ಬಗ್ಗೆ ಪ್ರಸ್ತಾಪಿಸಿದ ಅಂಗಡಿ, "ಸುರಕ್ಷತೆ ನಮ್ಮ ಆದ್ಯತೆಯಾಗಿದೆ" ಎಂದು ಹೇಳಿದರು.
ಮಾಲೀಕತ್ವದ ಹಕ್ಕು ಯಾವಾಗಲೂ ರೈಲ್ವೆಯಲ್ಲಿ ಇರುತ್ತದೆ. ನಿಯಂತ್ರಣವು ಭಾರತೀಯ ರೈಲ್ವೆ ಮತ್ತು ರೈಲ್ವೆಯ ಆಸ್ತಿ, ಜನರ ಬಳಿಯೇ ಇರಲಿದೆ ಎಂದು ಅವರು ಹೇಳಿದರು.
ಶೂನ್ಯ ವೇಳೆಯಲ್ಲಿ ರೈಲ್ವೆ ಪ್ಲಾಟ್ಫಾಮರ್್ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಕೈಗೊಂಡ ಕ್ರಮಗಳ ಬಗ್ಗೆ ವಿವರ ನೀಡಿದ ಅವರು, ಎಲ್ಲಾ ನಿಲ್ದಾಣಗಳಲ್ಲಿ ಒಂದೇ ಮಾದರಿಯಲ್ಲಿ ವಿಶೇಷ ಕೊಠಡಿಗಳನ್ನು ನಿಮರ್ಿಸಲಾಗಿದೆ. ಅಲ್ಲದೆ, ಅಗತ್ಯವಿದ್ದರೆ ಯಾವುದೇ ಹೆಚ್ಚಿನ ಸಹಾಯಕ್ಕಾಗಿ ಸ್ಟೇಷನ್ ಮಾಸ್ಟರ್ಗಳು ಪ್ರತಿ ಬಾರಿ ಪ್ಲಾಟ್ಫಾಮರ್್ಗಳಲ್ಲಿ ಲಭ್ಯವಿರಲಿದ್ದಾರೆ ಎಂದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 