ಮೈಸೂರಿನಲ್ಲಿ ಲಾಕ್ಡೌನ್ ಸಡಿಲಿಕೆ ಇಲ್ಲ: ಎಸ್.ಟಿ.ಸೋಮಶೇಖರ್
ಮೈಸೂರು, ಏ.23,ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಮೈಸೂರು ರೆಡ್ ಝೋನ್ ಇದ್ದು, ಜಿಲ್ಲೆಯಲ್ಲಿ ಲಾಕ್ಡೌನ್ ಸಡಿಲಿಕೆ ಇಲ್ಲ. ಮೆಡಿಕಲ್ ಎಮರ್ಜೆನ್ಸಿಯಂತಹ ತುರ್ತು ಪರಿಸ್ಥಿತಿಗಳಿಗೆ ಮಾತ್ರ ಓಡಾಟಕ್ಕೆ ಅನುಮತಿ ಕೊಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಮೈಸೂರಲ್ಲಿ ಇಷ್ಟು ಸೋಂಕು ಹರಡಲು ಜ್ಯೂಬ್ಲಿಯೆಂಟ್ ಹಾಗೂ ಜಮಾಅತ್ ನಿಂದ ಬಂದವರೇ ಕಾರಣ. ಇಲ್ಲಿಗೆ ಬಂದಿರುವುದು ಕೇವಲ 3ರಿಂದ 4 ಮಾತ್ರ. ನಾಗರಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲಿ, ಯಾವುದೇ ಕಾರಣಕ್ಕೂ ಅನವಶ್ಯಕವಾಗಿ ಮನೆಯಿಂದ ಆಚೆ ಬರಬಾರದೆಂದರು. ಕೃಷಿ ಚಟುವಟಿಕೆಗೆ ಈಗಾಗಲೇ ಅನುಮತಿ ಕೊಡಲಾಗಿದೆ. ಉಳಿದಂತೆ ಈ ಹಿಂದಿನ ಕ್ರಮವೇ ಮುಂದುವರಿಯುತ್ತದೆ. ಐಟಿ-ಬಿಟಿಗೆ ಅಗತ್ಯವಿರುವಷ್ಟು ಮಾತ್ರ ಅನುಮತಿ ಕೊಡಲಾಗಿದ್ದು, ಪರಿಸ್ಥಿತಿ ನೋಡಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ.
ಕಟ್ಟಡ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ಕಟ್ಟಡ ಕಾರ್ಮಿಕರು ಮೈಸೂರು ಜಿಲ್ಲೆಯವರಾಗಿದ್ದು, ಇಲ್ಲೇ ಇದ್ದರೆ ಮಾತ್ರ ಕೆಲಸ ಮಾಡಬಹುದು. ಹೊರ ಜಿಲ್ಲೆ ಇಲ್ಲವೇ ರಾಜ್ಯಗಳಿಂದ ಈ ಸಂದರ್ಭದಲ್ಲಿ ಇಲ್ಲಿಗೆ ಬಂದು ಕೆಲಸ ಮಾಡಲು ಅನುಮತಿ ಇಲ್ಲ. ತೀರಾ ತುರ್ತು ಇದ್ದವರು ಅನುಮತಿ ಪಡೆದು ಕೆಲಸ ಮಾಡಿಸಿಕೊಳ್ಳಬಹುದು. ಇನ್ನು ಕಬ್ಬಿಣ ಹಾರ್ಡ್ವೇರ್ ಅಂಗಡಿಗಳು ತೆರೆಯುವಂತಿಲ್ಲ. ಪ್ಲಂಬರ್ ಎಲೆಕ್ಟ್ರಿಕ್ ಕೆಲಸಗಳಿಗೆ ಪೊಲೀಸ್ ಅನುಮತಿ ಅವಶ್ಯಕ. ಉಳಿದ ವಿಷಯಗಳಿಗೆ ಮೇ 3ನೇ ತಾರೀಖಿನವರೆಗೆ ಯಾವುದೇ ಕಾರಣಕ್ಕೂ ಅನುಮತಿ ಇಲ್ಲ. ಆಮೇಲೆ ಈ ಬಗ್ಗೆ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಳ್ಳಲಾಗುವುದೆಂದರು.
ರೈತರು ತಮ್ಮ ಹಳೇ ಸಾಲವನ್ನು ತೀರಿಸುವ ಸಲುವಾಗಿ ಸುಸ್ತಿ ಮನ್ನಾ ಮಾಡಲಾಗುವುದು. ಇದಕ್ಕೆ ಮಾರ್ಚ್ 31ರ ವರೆಗೆ ಗಡುವು ನೀಡಲಾಗಿತ್ತು. ಈ ಗಡುವನ್ನು ಮತ್ತೆ ಮೂರು ತಿಂಗಳ ಅವಧಿಗೆ ವಿಸ್ತರಿಸಲಾಗುವುದು. ಅವಧಿ ವಿಸ್ತರಣೆಯಿಂದ 14 ಕೋಟಿ ರೂ. ಬಡ್ಡಿ ಹೊರೆ ಬರುತ್ತದೆ. ಅದನ್ನು ಸರ್ಕಾರವೇ ಭರಿಸುವುದಾಗಿ ಮುಖ್ಯಮಂತ್ರಿಗಳು ಹೇಳಿರುವುದಾಗಿ ಸಚಿವರು ತಿಳಿಸಿದರು.ಸಚಿವರು ಶ್ರೀ ರಾಮಕೃಷ್ಣ ಆಶ್ರಮದ ವತಿಯಿಂದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ವಿವೇಕ ಸ್ಮಾರಕದ ಆವರಣ ದಲ್ಲಿ ಹಮ್ಮಿಕೊಳ್ಳಲಾಗಿರುವ ಬಡವರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಸ್ವಾಮಿ ಮುಕ್ತಿದಾನಂದರು ಪಾಲ್ಗೊಂಡರು.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 