ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆಯೇ ಇಲ್ಲ : ನಿತಿನ್ ಗಡ್ಕರಿ
ಮುಂಬೈ, ನ 7: ಮಹಾರಾಷ್ಟ್ರ ರಾಜ್ಯ ರಾಜಕಾರಣಕ್ಕೆ ಮರುಳುವ ಯಾವುದೇ ಉದ್ದೇಶ ಇಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಹೊಸ ಸರ್ಕಾರ ಸ್ಥಾಪನೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟೀಕರಣ ನೀಡಿದ್ದಾರೆ. ಮುಂದಿನ ಸರ್ಕಾರ ರಚನೆಯಲ್ಲಿ ನೀವು ಭಾಗಿಯಾಗುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ದೆಹಲಿಯಲ್ಲಿ ಮಾಡಲು ಸಾಕಷ್ಟು ಕೆಲಸವಿದೆ. ಹೀಗಾಗಿ ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ಆರ್ ಎಸ್ ಎಸ್ ನಾಯಕರು ಹೊಸ ಸರ್ಕಾರ ರಚನೆ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ, ತಮ್ಮ ಸಹಕಾರ ಕೋರಿದ್ದಾರೆ ಎಂಬ ವರದಿಗಳಲ್ಲಿ ಯಾವುದೇ ಹುರುಳಿಲ್ಲ, ಸತ್ಯಾಂಶವೂ ಇಲ್ಲ. ಚುನಾವಣೆಗೆ ಮೊದಲೇ ಬಿಜೆಪಿ, ದೇವೇಂದ್ರ ಫಡ್ನವಿಸ್ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿತ್ತು. ಅದರಂತೆ ಜನಾದೇಶವೂ ಹೊರಬಂದಿದ್ದು ಬಿಜೆಪಿ - ಶಿವಸೇನೆ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು ಅವರು ಹೇಳಿದರು. ಈ ನಡುವೆ ಗಡ್ಕರಿ ಅವರು ಬುಧವಾರ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಹೊಸ ವ್ಯಾಖ್ಯಾನ, ಹೊಸ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದ್ದು ಆರ್ ಎಸ್ ಎಸ್ ನಾಯಕರು ನಿತಿನ್ ಗಡ್ಕರಿ ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಲಿದ್ದಾರೆ ಎಂಬ ವದಂತಿಗೆ ಕಾರಣವಾಗಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 