ನೆರೆ ನಿರ್ವಹಣೆಗೆ ಹಣಕಾಸಿನ ಕೊರತೆ ಇಲ್ಲ: ಆರ್ ಅಶೋಕ್
ಮಂಡ್ಯ, ಅ 4: ನೆರೆ ಪರಿಹಾರಕ್ಕೆ ಅನುದಾನ ನೀಡಲು ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೊ ಗೊತ್ತಿಲ್ಲ. ಆದರೆ, ನನ್ನ ಪ್ರಕಾರ ನೆರೆ ನಿರ್ವಹಣೆಗೆ ಹಣಕಾಸಿನ ಕೊರತೆ ಇಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ನಿರ್ವಹಣೆ ಕಂದಾಯ ಇಲಾಖೆಯ ನಿರ್ವಹಣೆಯಲ್ಲೇ ಬರುತ್ತದೆ. ನನ್ನ ಪ್ರಕಾರ ನೆರೆ ನಿರ್ವಹಣೆಗೆ ಹಣಕಾಸಿನ ಕೊರತೆ ಇಲ್ಲ. ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ ಎಂದರು.
ರಾಜ್ಯ ಸರ್ಕಾರದ ನೆರೆ ಪರಿಹಾರ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ. ಅದರ ಬದಲಾಗಿ ಕೆಲವು ಬದಲಾವಣೆ ಬಯಸಿದ್ದು, ರಾಜ್ಯ ಸರ್ಕಾರದ ವರದಿ ಮತ್ತು ಕೇಂದ್ರ ಸರ್ಕಾರದ ವರದಿಗಳಲ್ಲಿ ಸಾಮ್ಯತೆ ಇದೆ ಎಂದು ತಿಳಿಸಿದರು.
ನಮ್ಮ ರಾಜ್ಯಕ್ಕೆ ಪರಿಹಾರ ನೀಡಿದರೆ ಬೇರೆ ರಾಜ್ಯಗಳು ಕೇಳುತ್ತಾರೆ. ಬೇರೆ ರಾಜ್ಯಗಳಲ್ಲೂ ನೆರೆ ಉಂಟಾಗಿರುವುದರಿಂದ ಎಲ್ಲಾ ರಾಜ್ಯಗಳಿಗೂ ಒಟ್ಟಿಗೆ ಅನುದಾನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದಂತೆ ಕಾಣುತ್ತದೆ. ಮೂನರ್ಾಲ್ಕು ದಿನಗಳಲ್ಲಿ ನೆರೆ ಪರಿಹಾರ ನೀಡುವ ನಿರೀಕ್ಷೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 