ಗೊಬ್ಬರ ಸಿಗುತ್ತಿಲ್ಲ ಎಂದು ಮಣ್ಣು ತಿಂದು ಆಕ್ರೋಶ
There is no shortage of urea fertilizer: CM Siddaramaiah
ಯೂರಿಯಾ ರಸಗೊಬ್ಬರ ಕೊರತೆ ಇಲ್ಲ:
ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಹೆಚ್ಚಾಗಿದ್ದು, ಮುಂಗಾರು ಮಳೆ ಬೇಗ ಶುರುವಾಯಿತು. ಜೋಳ ಹಾಕಿರುವುದು ಜಾಸ್ತಿ ಆಗಿದೆ. ಹಾಗಾಗಿ ಜಾಸ್ತಿ ರಸಗೊಬ್ಬರ ಉಪಯೋಗಿಸಿದ್ದಾರೆ ಎಂದರು.
ಕೊಪ್ಪಳ: ಗೊಬ್ಬರ ಸಿಗುತ್ತಿಲ್ಲ ಎಂದು ಮಣ್ಣು ತಿಂದು ಆಕ್ರೋಶ
ಎಲ್ಲಿ ಕೇಳಿದರೂ ಯೂರಿಯಾ ಗೊಬ್ಬರ ಸಿಗುತ್ತಿಲ್ಲ ಎಂದು ಆಕ್ರೋಶಗೊಂಡ ರೈತನೋರ್ವ ಮಣ್ಣು ತಿಂದು ಪ್ರತಿಭಟಿಸಿದ ಘಟನೆ ಶನಿವಾರ ನಡೆದಿದೆ.
ಕೊಪ್ಪಳ ತಾಲೂಕಿನ ಕುಣಕೇರಿ ತಾಂಡಾದ ಚಂದ್ರಪ್ಪ ಬಡಗಿ ಅವರು ಕೊಪ್ಪಳದ ಗಂಜ್ ವೃತ್ತದ ಬಳಿ ಇರುವ ತಾಲೂಕು ಒಕ್ಕುಲತನ ಹುಟ್ಟುವಳಿ ಸಮಿತಿ ಗೋದಾಮಿನ ಮುಂದೆ ಆಕ್ರೋಶ ಹೊರಹಾಕಿದ್ದಾರೆ.
ಎಲ್ಲಿ ಕೇಳಿದರೂ ಯೂರಿಯಾ ಗೊಬ್ಬರ ಸಿಗುತ್ತಿಲ್ಲ, ಗೊಬ್ಬರದ ಅಂಗಡಿ ಮುಂದೆ ನೋ ಸ್ಟಾಕ್ ಬೋರ್ಡ್ ಎಂದು ಬೋರ್ಡ್ ಹಾಕಿದೆ ಎಂದು ರೈತ ಸಿಟ್ಟಾಗಿದ್ದಾರೆ.
ನಮ್ಮ ಹೊಲಕ್ಕೆ ಗೊಬ್ಬರ ಸಿಗುತ್ತಿಲ್ಲ. ನಾವೇನು ಮಣ್ಣು ತಿನ್ನಬೇಕಾ ಎಂದು ಆಕ್ರೋಶ ಹೊರ ಹಾಕಿದ್ದಾರೆ. ನೆಲದಲ್ಲಿನ ಮಣ್ಣು ತಗೆದುಕೊಂಡು ತಿಂದ ರೈತ ಪ್ರತಿಭಟನೆ ನಡೆಸಿದ್ದಾರೆ.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 