ಜೋಡಿ ಎತ್ತುಗಳ ಆಕರ್ಷಕ ಖಾಲಿ ಗಾಡಾ ಶರ್ಯತ್ತು
ಬೈಲಹೊಂಗಲ 30: ಪಟ್ಟಣದ ಮರಡಿ ಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮರಡಿ ಬಸವೇಶ್ವರ ತರುಣ ಸಂಘದ ವತಿಯಿಂದ ಶುಕ್ರವಾರ ನಡೆದ ಜೋಡಿ ಎತ್ತುಗಳ ಆಕರ್ಷಕ ಖಾಲಿ ಗಾಡಾ ಶರ್ಯತ್ತಿನಲ್ಲಿ ಎತ್ತುಗಳ ರೋಮಾಂಚನಕಾರಿ ಓಟ ನೋಡುಗರ ಗಮನ ಸೆಳೆದವು.
ಪಟ್ಟಣದ ದೇವಲಾಪುರ ರಸ್ತೆಯ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ನಡೆದ ಖಾಲಿ ಗಾಡಾ ಶರ್ಯತ್ತಿಗೆ ಉದ್ಯಮಿ ವಿಜಯ ಮೆಟಗುಡ್ಡ ಚಾಲನೆ ನೀಡಿ ಮಾತನಾಡಿ, ಗ್ರಾಮೀಣ ಕಲೆ, ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಚಕ್ಕಡಿ ಶರ್ಯತ್ತು ನಡೆಸಲಾಗುತ್ತಿದೆ. ಕ್ರೀಡಾಸಕ್ತರು ಗ್ರಾಮೀಣ ಕ್ರೀಡಾ ಚಟುವಟಿಕೆಗಳನ್ನು ನೋಡಿ ಪ್ರೋತ್ಸಾಹಿಸಬೇಕು ಎಂದರು.
ಚಿತ್ರನಟ ಶಿವರಂಜನ ಬೋಳನ್ನವರ, ಮಹಾಂತೇಶ ತುರಮರಿ, ಬಸವರಾಜ ಜನ್ಮಟ್ಟಿ, ಕುಮಾರ ದೇಶನೂರ, ಸಂಘಟಕರಾದ ಗುರು ಮೆಟಗುಡ್ಡ, ಸುನೀಲ ಮರಕುಂಬಿ, ಮಹಾಂತೇಶ ಹೊಸೂರ, ಶಿವಾನಂದ ಹೊಸೂರ, ಸುಭಾಸ ತುರಮರಿ, ಗಂಗಪ್ಪ ಹೊಸೂರ, ಶಿವಾನಂದ ಕೊಪ್ಪದ, ಉಮೇಶ ಅಂಕಲಗಿ, ಸಿದ್ಲಿಂಗ ಶಿರವಂತಿ, ರಫೀಕ ದೇಶನೂರ ಹಾಗೂ ಮತ್ತಿತರರು ಇದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 