ಜೋಡಿ ಎತ್ತುಗಳ ಆಕರ್ಷಕ ಖಾಲಿ ಗಾಡಾ ಶರ್ಯತ್ತು
ಬೈಲಹೊಂಗಲ 30: ಪಟ್ಟಣದ ಮರಡಿ ಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮರಡಿ ಬಸವೇಶ್ವರ ತರುಣ ಸಂಘದ ವತಿಯಿಂದ ಶುಕ್ರವಾರ ನಡೆದ ಜೋಡಿ ಎತ್ತುಗಳ ಆಕರ್ಷಕ ಖಾಲಿ ಗಾಡಾ ಶರ್ಯತ್ತಿನಲ್ಲಿ ಎತ್ತುಗಳ ರೋಮಾಂಚನಕಾರಿ ಓಟ ನೋಡುಗರ ಗಮನ ಸೆಳೆದವು.
ಪಟ್ಟಣದ ದೇವಲಾಪುರ ರಸ್ತೆಯ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ನಡೆದ ಖಾಲಿ ಗಾಡಾ ಶರ್ಯತ್ತಿಗೆ ಉದ್ಯಮಿ ವಿಜಯ ಮೆಟಗುಡ್ಡ ಚಾಲನೆ ನೀಡಿ ಮಾತನಾಡಿ, ಗ್ರಾಮೀಣ ಕಲೆ, ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಚಕ್ಕಡಿ ಶರ್ಯತ್ತು ನಡೆಸಲಾಗುತ್ತಿದೆ. ಕ್ರೀಡಾಸಕ್ತರು ಗ್ರಾಮೀಣ ಕ್ರೀಡಾ ಚಟುವಟಿಕೆಗಳನ್ನು ನೋಡಿ ಪ್ರೋತ್ಸಾಹಿಸಬೇಕು ಎಂದರು.
ಚಿತ್ರನಟ ಶಿವರಂಜನ ಬೋಳನ್ನವರ, ಮಹಾಂತೇಶ ತುರಮರಿ, ಬಸವರಾಜ ಜನ್ಮಟ್ಟಿ, ಕುಮಾರ ದೇಶನೂರ, ಸಂಘಟಕರಾದ ಗುರು ಮೆಟಗುಡ್ಡ, ಸುನೀಲ ಮರಕುಂಬಿ, ಮಹಾಂತೇಶ ಹೊಸೂರ, ಶಿವಾನಂದ ಹೊಸೂರ, ಸುಭಾಸ ತುರಮರಿ, ಗಂಗಪ್ಪ ಹೊಸೂರ, ಶಿವಾನಂದ ಕೊಪ್ಪದ, ಉಮೇಶ ಅಂಕಲಗಿ, ಸಿದ್ಲಿಂಗ ಶಿರವಂತಿ, ರಫೀಕ ದೇಶನೂರ ಹಾಗೂ ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 