ಫೆ.6 ರಿಂದ ಮಾಗಡಿ ರೈತರಿಂದ ಅವರೆ ಮೇಳ
ಬೆಂಗಳೂರು,ಫೆ.5, ಮಾಗಡಿ ರೈತರಿಂದ ಅವರೆ ಬೇಳೆ ಹಾಗೂ ಇದರಿಂದ ತಯಾರಿಸಲಾದ ತಿಂಡಿ ತಿನಿಸುಗಳ ಮೇಳವನ್ನು ಫೆ.6 ರಿಂದ 16ರ ವರೆಗೆ ಸಜ್ಜನ್ ರಾವ್ ಸರ್ಕಲ್ ನಲ್ಲಿ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಿಳಿಸಿದೆ. ಸುದ್ದಿ ಗೋಷ್ಠಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಈ ಮೇಳವನ್ನು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಉದ್ಘಾಟಿಸಲಿದ್ದು, ಮೇಳವು ರೈತರು ಮತ್ತು ಗ್ರಾಹಕರ ನಡುವೆ ನಡೆಯಲಿದೆ. ಅವರೆ ಬೇಳೆಯಿಂದ ತಯಾರಿಸಿದ 100 ಬಗೆಯ ತಿಂಡಿ ತಿನಿಸುಗಳನ್ನು ಮೇಳದಲ್ಲಿ ಇಡಲಾಗುವುದು ಎಂದರು.ರೈತರು ಬೆಳೆದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವುದು ಸರ್ಕಾರದ ಜವಾಬ್ದಾರಿ. ಆದರೆ ಸರ್ಕಾರ ರೈತರನ್ನು ಉತ್ತೇಜಿಸುವ ಬದಲು ಅವರ ಅನ್ನ ಕಸಿದುಕೊಳ್ಳುವ ಕೆಲಸ ಮಾಡುತ್ತಿವೆ. ಸಜ್ಜನ್ ರಾವ್ ಸರ್ಕಲ್ ನಲ್ಲಿ ರೈತರು ಮೇಳ ನಡೆಸದಂತೆ ಕೆಲ ಕಾಣದ ಕೈಗಳು ತಡೆ ಹಿಡಿದಿದ್ದು, ಇದು ರೈತರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ಒಂದು ವೇಳೆ ಮೇಳ ನಡೆಯುವುದನ್ನು ತಡೆ ಹಿಡಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ರೈತರು ಪ್ರವಾಹ ಹಾಗೂ ಬರದಿಂದ ಇನ್ನೂ ಚೇತರಿಸಿಕೊಳ್ಳದೆ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ರೈತರ 1400 ಕೋಟಿ ಸಾಲ ಮನ್ನಾ ಮಾಡಲಿ ಎಂದು ಒತ್ತಾಯಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 