ಯುವನಿಧಿ ಯೋಜನೆಯ ಸೌಲಭ್ಯ ಅರ್ಹರು ಪಡೆದುಕೊಳ್ಳಬೇಕು : ಬಿ.ಬಿ.ಅಸೂಟಿ
Those eligible should avail the benefits of the Youth Fund Scheme: B.B. Asuti
ಗದಗ 14 : ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಯುವ ನಿಧಿ ಯೋಜನೆಯ ಸೌಲಭ್ಯವನ್ನು ಅರ್ಹರು ಪಡೆದುಕೊಳ್ಳಬೇಕು. ಯುವಕರು ಉದ್ಯೋಗ ತರಬೇತಿ ಜೊತೆಗೆ ಕೌಶಲ್ಯಾಭಿವೃದ್ಧಿ ಬೆಳೆಸಿಕೊಳ್ಳಲು ಈ ಕಾರ್ಯಾಗಾರ ಸಹಕಾರಿಯಾಗಲಿದೆ ಎಂದು ಗದಗ ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ತಿಳಿಸಿದರು.
ನಗರದ ಆದರ್ಶ ಶಿಕ್ಷಣ ಸಮಿತಿಯ ವಾಣಿಜ್ಯ ಮಹಾವಿದ್ಯಾಲಯದ ಎಸ್. ಜೆ. ಹಾಲ್ ದಲ್ಲಿ ಮಂಗಳವಾರ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆ, ಆದರ್ಶ ಶಿಕ್ಷಣ ಸಮಿತಿಯ ವಾಣಿಜ್ಯ ಮಹಾವಿದ್ಯಾಲಯ, ಗದಗ ಇವರ ಸಂಯುಕ್ತ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಸಮಾಲೋಚನೆ ಮತ್ತು ಉದ್ಯೋಗಕೋಶ ಆಯೋಜಿಸಲಾದ ವೃತ್ತಿ ಮಾರ್ಗದರ್ಶನ , ಯುವ ನಿಧಿ ಮತ್ತು ಸಂಚಾರಿ ನೋಂದಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪದವಿ ಅಥವಾ ಡಿಪ್ಲೋಮಾ ಮುಗಿಸಿದ ಯುವಕರಿಗೆ ಉದ್ಯೋಗ ತರಬೇತಿಯ ಜೊತೆಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕೊಡುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ. ರಾಜ್ಯ ಸರ್ಕಾರ 2023 ಚುನಾವಣೆ ಪೂರ್ವದಲ್ಲಿಯೇ 5 ಗ್ಯಾರಂಟಿಗಳನ್ನು ಉಚಿತವಾಗಿ ಕೊಡುವ ಕುರಿತು ಭರವಸೆ ನೀಡಿತ್ತು. ಅದರಂತೆಯೇ ಅನ್ನಭಾಗ್ಯ, ಗೃಹಲಕ್ಷ್ಮೀ, ಶಕ್ತಿ, ಗೃಹಜ್ಯೋತಿ, ಯುವನಿಧಿ ಈ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಬಡಜನರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಿ ಅವರ ಬದುಕನ್ನು ಹಸನಾಗಿಸಿದೆ.
ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದೆ. ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3000 ಮತ್ತು ಡಿಪ್ಲೋಮಾ ಹೊಂದಿರುವವರಿಗೆ 1,500 ಮಾಸಿಕ ಭತ್ಯೆಯನ್ನು ಗರಿಷ್ಟ 2 ವರ್ಷಗಳವರಗೆ ಅಥವಾ ಉದ್ಯೋಗ ಸಿಗುವವರೆಗೆ ಒದಗಿಸುತ್ತದೆ. ಯುವನಿಧಿ ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು. ಉದ್ಯೋಗಕ್ಕೆ ಸಹಾಯಕವಾಗುವ ಕೌಶಲ್ಯತೆಯನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸಿದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರು ಮಾತನಾಡಿ ಯುವನಿಧಿ ಯೋಜನೆಯು ಯುವಕರಿಗೆ ಡಿಗ್ರಿ ಮುಗಿದ ನಂತರ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಯುವಕರು ಯೋಜನೆಯ ಈ ಹಣವನ್ನು ಪಾಕೆಟ್ ಮನಿ ಎಂದು ಬಳಸಿಕೊಳ್ಳದೇ ಉದ್ಯೋಗಕ್ಕೆ ಸಹಾಯವಾಗುವ ಕೌಶಲ್ಯತೆಯನ್ನು ಬೆಳೆಸಿಕೊಳ್ಳಲು ಉಪಯೋಗಿಸಬೇಕು ಎಂದು ತಿಳಿಸಿದರು. ಆನಂದ ಹೊಂಬಳ ಅವರು ರಾಜ್ಯ ಸರ್ಕಾರದ ಯುವನಿಧಿ ಯೋಜನೆ ವೃತ್ತಿ ಮಾರ್ಗದರ್ಶನ ಕುರಿತು ಹಾಗೂ ಸರಕಾರದಿಂದ ಸಿಗುವ ಸೌಲಭ್ಯಗಳ ಕುರಿತು ವಿವರಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 