ಸೀಲಿಂಗ್ ಕುಸಿದು ಬಿದ್ದು ಕ್ವಾರಂಟೈನ್ನಲ್ಲಿದ್ದವರು ಪಾರು
ಬೆಂಗಳೂರು, ಮೇ 22,ಹೊರದೇಶದಿಂದ ಬಂದು ನಗರದ ಮೆಜೆಸ್ಟಿಕ್ ಬಳಿ ಕ್ವಾರಂಟೈನ್ ನಲ್ಲಿ ಉಳಿದುಕೊಂಡಿರುವ ಕುಟುಂಬವೊಂದು ಹೋಟೆಲ್ ನಲ್ಲಿ ಸಂಭವಿಸಿದ ಅವಘಡದಿಂದ ಪ್ರಾಣಾಪಾಯದಿಂದ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ನಡೆದಿದೆ.ವಿದೇಶದಿಂದ ಬಂದು ಮೆಜೆಸ್ಟಿಕ್ ಬಳಿ ಹೋಟೆಲ್ ಒಂದರಲ್ಲಿ ಹಣ ಪಾವತಿಸಿ ಮೀನಾಕ್ಷಿ ವೆಂಕಟರಮಣ ಎನ್ನುವರ ಕುಟುಂಬ ತಂಗಿತ್ತು. ಮೀನಾಕ್ಷಿ ಅವರು ಸ್ನಾನ ಮಾಡುವಾಗ ಹೋಟೆಲ್ನ ಬಾತ್ರೂಮ್ನ ಸೀಲಿಂಗ್ ಕುಸಿದು ಬಿದ್ದದ್ದು ಮೀನಾಕ್ಷಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಸೀಲಿಂಗ್ ಅವಸ್ಥೆ ಬಗ್ಗೆ ಮೀನಾಕ್ಷಿ ಅವರು ಹೋಟೆಲ್ ಸಿಬ್ಬಂದಿ ಗಮನಕ್ಕೆ ತಂದಿದ್ದರೂ ಹೋಟೆಲ್ನವರು ನಿರ್ಲಕ್ಷ್ಯವಹಿಸಿದ್ದರು ಎಂದು ಮೀನಾಕ್ಷಿ ಆರೋಪಿಸಿದ್ದಾರೆ.ಈ ಬಗ್ಗೆ ಮಾಹಿತಿಯನ್ನು ಮೀನಾಕ್ಷಿ ಅವರ ಮಗ ಟ್ವಿಟ್ಟರ್ಗೆ ಹಾಕಿ ಕ್ಟಾರಂಟೈನ್ ವ್ಯವಸ್ಥೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವು ಇಲ್ಲಿಗೆ ಏಳು ದಿನಗಳು ಬಂದಿದ್ದೇವೆ. ಆದರೆ, ನಮ್ಮ ಸ್ವ್ಯಾಬ್ ಪರೀಕ್ಷೆಯನ್ನು ಯಾವಾಗ ಮಾಡಲಾಗುತ್ತದೆ ಎಂದು ನಮಗೆ ತಿಳಿದಿಲ್ಲ.ನಾವು ವಿಚಾರಿಸಿದಾಗ, ಹಿರಿಯ ನಾಗರಿಕರು, ಗರ್ಭಿಣಿಯರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಪರೀಕ್ಷಿಸಲು ಅಧಿಕಾರಿಗಳಿಗೆ ಮಾತ್ರ ಆದೇಶವಿದೆ ಎಂದು ನಮಗೆ ತಿಳಿಸಿದ್ದಾರೆ.ನಮ್ಮನ್ನು ಇಂತಹ ಕೆಟ್ಟ ಹೋಟೆಲ್ನಲ್ಲಿ ಉಳಿಯಲು ಬಿಟ್ಟು ಹೋಟೆಲ್ ಬಿಲ್ ಕಟ್ಟಿಸುತ್ತಿದ್ದಾರೆ'' ಎಂದು ಮೀನಾಕ್ಷಿ ಅವರು ದೂರಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 