ಸಂತ್ರಸ್ತರ ರಕ್ಷಣೆಗೆ ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಕಾಯರ್ಾಚರಣೆ
ಬೆಂಗಳೂರು,ಆ.20- ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಕೊಡಗಿನಲ್ಲಿ ಸಂತ್ರಸ್ತರ ರಕ್ಷಣೆಗೆ ಸೇನೆ, ಎನ್ಡಿಆರ್ಎಫ್, ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸರು ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಸಿಬ್ಬಂದಿ ತಂಡ ಕಾಯರ್ಾಚರಣೆ ನಡೆಸುತ್ತಿದೆ.
ಕಳೆದ 15 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ತತ್ತರಿಸಿರುವ ಕೊಡಗಿನಲ್ಲಿ ಮಳೆಯ ಪ್ರಮಾಣ ಕೊಂಚ ತಗ್ಗಿದ್ದು , ನಾಲ್ಕು ದಿನಗಳಿಂದ ಕಾಯರ್ಾಚರಣೆ ನಡೆಸುತ್ತಿರುವ ವಿವಿಧ ತಂಡಗಳ ಕಾಯರ್ಾಚರಣೆ ಇಂದು ಸಂಜೆ ಬಹುತೇಕ ಮುಗಿಯಲಿದೆ.
ಭಾರೀ ಮಳೆಗೆ ಬೆಟ್ಟಗುಡ್ಡ ಕುಸಿದಿದ್ದು ಹಲವಾರು ಮನೆಗಳು ನೆಲಕ್ಕುರುಳಿದ್ದು,ರಸ್ತೆ ಸಂಪರ್ಕ ಕಡೆದುಕೊಂಡಿದ್ದು, ಈವರೆಗೆ ಎಂಟು ಮಂದಿ ಮೃತರಾಗಿದ್ದಾರೆ.
ಕೆಎಸ್ಆರ್ಪಿಯ ಮೂರು ತುಕಡಿ ಗರುಡಾ ಪಡೆ, ಕಮಾಂಡೊ ಪಡೆ ಕೂಡ ಸ್ಥಳದಲ್ಲಿದ್ದು, ಕೆಎಸ್ಆರ್ಪಿ ಎಡಿಜಿಪಿ ಭಾಸ್ಕರ್ ರಾವ್ ಅವರಲ್ಲಿ ಅಲ್ಲೇ ಮೊಕ್ಕಾಂ ಹೂಡಿದ್ದಾರೆ.
ಕಾಯರ್ಾಚರಣೆ ಪಡೆಗಳು ಅಪಾಯದಲ್ಲಿ ಸಿಲುಕಿರುವವರನ್ನು ರಕ್ಷಿಸಿ ನಿರಾಶ್ರಿತರ ಶಿಬಿರಗಳಿಗೆ ಸ್ಥಳಾಂತರ ಮಾಡುತ್ತಿವೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಕಮಲ್ ಪಂಥ್ ಅವರು ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 