ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಸಾವು, ಇಬ್ಬರಿಗೆ ಗಾಯ
Three Killed, Two Injured as Car Rams Stationary Lorry in Telangana
ಕರೀಂನಗರ, ಸೆ. 18 : ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ತೆಲಂಗಾಣದ ಕರೀಂನಗರ ಜಿಲ್ಲೆಯ ಶಂಕರಪಟ್ಟಣಂ ಮಂಡಲದ ತಡಿಕಲ್ನಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಕಾರಿನಲ್ಲಿದ್ದ ಐವರು ರಾಷ್ಟ್ರೀಯ ಹೆದ್ದಾರಿ-563ರ ಮೂಲಕ ನಿಜಾಮಾಬಾದ್ನಿಂದ ವಾರಂಗಲ್ಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ತಡಿಕಲ್ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ.
ಮೃತರನ್ನು ವಾರಂಗಲ್ನ ವಿಶ್ವೇಶ್ವರ ರಾವ್ ಹಾಗೂ ನಿಜಾಮಾಬಾದ್ನ ಪ್ರಭು ಮತ್ತು ಶುಧಕರ್ ಎಂದು ಗುರುತಿಸಲಾಗಿದೆ. ಇವರು ನಿಜಾಮಾಬಾದ್ ಜಿಲ್ಲೆಯ ದಿಚ್ಪಲ್ಲಿ ಮಂಡಲದ ಯಾನಂಪಲ್ಲಿಯ 400 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಗಾಯಗೊಂಡಿರುವ ಪ್ರವೀಣ್ ಮತ್ತು ಮುರಳ್ ಅವರನ್ನು ಚಿಕಿತ್ಸೆಗಾಗಿ ಕರೀಂನಗರ ಸರ್ಕಾರಿ ಪ್ರಧಾನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 