ಕೊರೊನಾ ಸೋಂಕಿಗೆ ಮೂರು ದಿನದ ಹಸುಳೆ ಬಲಿ ...!!
ಚಂಡೀಗರ್, ಮೇ 26,ಕೊರೊನಾ ಸೋಂಕಿಗೆ ಮೂರು ದಿನದ ಹಸುಳೆ ಬಲಿಯಾಗಿದೆ. ಇದರಿಂದ ಕೇಂದ್ರಾಡಳಿತ ಪ್ರದೇಶದಲ್ಲಿ ಕರೋನ ಸೋಂಕಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.ಮೂರು ದಿನಗಳ ಹಿಂದೆಯಷ್ಟೆ ಜನಿಸಿದ ಮಗು ಸಾವಿನ ನಂತರದಲ್ಲಿ ಮಗುವಿನ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಮಗುವಿನಲ್ಲಿ ಕರೋನ ಸೋಂಕು ಇರುವುದು ದೃಢಪಟ್ಟಿದೆ.ಇದೀಗ ತಾಯಿಯ ರಕ್ತ ಹಾಗೂ ಗಂಟಲು ದ್ರವ್ಯದ ಮಾದರಿಯನ್ನು ಸಂಗ್ರಹಿಸಿರುವ ವೈದ್ಯರು ವೈದ್ಯಕೀಯ ತಪಾಸಣೆಗೆ ಕಳುಹಿಸಿಕೊಟ್ಟಿದ್ದಾರೆ. ತಾಯಿಗೂ ಕೊರೊನಾ ವೈರಸ್ ಸೋಂಕು ತಗಲಿದೆಯೇ ಎನ್ನುವುದು ವರದಿ ಬಂದ ನಂತರವಷ್ಟೇ ಖಚಿತವಾಗಲಿದೆ.ಕೇಂದ್ರಾಡಳಿತ ಪ್ರದೇಶವಾಗಿರುವ ಚಂಡೀಗರ್ ನಲ್ಲಿ ಕೊರೊನಾ ಸೋಂಕಿಗೆ ಇದುವರೆಗೂ ನಾಲ್ವರು ಬಲಿಯಾಗಿದ್ದಾರೆ. 266 ಜನರಿಗೆ ಸೊಂಕು ತಗಲಿರುವುದು ದೃಡಪಟ್ಟಿದೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 