ಕೊರೋನಾ ಭೀತಿ ಹಿನ್ನೆಲೆ: ಭೀಕರ ರಸ್ತೆ ಅಪಘಾತ: ಮೂವರು ಸಾವು
ಬಾಗಲಕೋಟೆ, ಮಾ 24, ಮಹಾಮಾರಿ ಕೋವಿಡ್-19 ಸೋಂಕಿನ ನಿರ್ಬಂಧದ ನಡುವೆಯೂ ತಮ್ಮ ಊರಿಗೆ ಹೊರಟಿದ್ದ ಮೂವರು ಕಾರು ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಇಳಕಲ್ ತಾಲೂಕಿನ ಹಿರೇಕೊಡಗಲಿ ಬಳಿ ಮಂಗಳವಾರ ಸಂಭವಿಸಿದೆ.ಬೀದರ ಜಿಲ್ಲೆ ಬಾಲ್ಕಿ ತಾಲೂಕಿನ ಕಟಕಚಿಂಚೂಳಿ ಗ್ರಾಮದ ಸುವರ್ಣ (40), ಬಸವಣ್ಣೆಪ್ಪ (70) ಸವಿತಾ (20) ಮೃತ ದುರ್ದೈವಿಗಳು. ಕೊರೋನಾ ಭೀತಿ ಹಿನ್ನೆಲೆಯಲ್ಲಿ ನಗರ ಪ್ರದೇಶದಿಂದ ತಮ್ಮ ಊರಿಗೆ ತೆರಳುತ್ತಿದ್ದ ಇವರು ದಯನೀಯವಾಗಿ ಅಸುನೀಗಿದ್ದಾರೆ. ಮೃತರೆಲ್ಲರೂ ಬೆಂಗಳೂರನಿಂದ ಇಳಕಲ್ ಮಾರ್ಗವಾಗಿ ಬೀದರಗೆ ತೆರಳುತ್ತಿದ್ದಾಗ, ಹಿರೇಕೊಡಗಲಿ ಬಳಿ ರಸ್ತೆ ತಿರುವು ಗೊತ್ತಾಗದೆ ಕಲ್ಲು ಬಂಡೆಗೆ ಕಾರು ಡಿಕ್ಕಿ ಹೊಡಿದಿದೆ. ಪರಿಣಾಮ ಆರು ಜನರು ಗಂಭೀರ ಗಾಯಗೊಂಡಿದ್ದು, ಇಳಕಲ್ ಆಸ್ಪತ್ರೆಗೆ ಸಾಗಿಸುವ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ. ಇಳಕಲ್ ನಿಂದ ಬಾಗಲಕೋಟೆ ಆಸ್ಪತ್ರೆಗೆ ಹೋಗುವ ವೇಳೆ ಇನ್ನೊಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಮೂರು ಜನ ಗಂಭೀರ ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 