ವ್ಯಾನ್ ನೀರಿನ ಟ್ಯಾಂಕರ್‌ಗೆ ಡಿಕ್ಕಿ: ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಮೂವರು ಸಾವು, ಐವರಿಗೆ ಗಾಯ

ವ್ಯಾನ್ ನೀರಿನ ಟ್ಯಾಂಕರ್‌ಗೆ ಡಿಕ್ಕಿ: ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಮೂವರು ಸಾವು, ಐವರಿಗೆ ಗಾಯ Three killed, five injured as van rams water tanker in Andhra Pradesh’s Chittoor

ಚಿತ್ತೂರು, ಜುಲೈ 27 : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಸಂತಿಪುರಂ ಮಂಡಲದ ಕಡಪಲ್ಲಿ ಗ್ರಾಮದಲ್ಲಿ ಸೋಮವಾರ ವ್ಯಾನ್‌ವೊಂದು ನೀರಿನ ಟ್ಯಾಂಕರ್ ಲಾರಿಗೆ ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಾನ್‌ವೊಂದು ನೀರಿನ ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸುಂದರಪ್ಪ (60), ವೆಂಕಟಮ್ಮ (50) ಹಾಗೂ ನಾಲ್ಕು ವರ್ಷದ ಬಾಲಕ ಮೃತಪಟ್ಟಿದ್ದಾರೆ. ನೀರಿನ ಟ್ಯಾಂಕರ್ ಲಾರಿಯ ಬಳಿ ನಿಂತಿದ್ದಾಗ ಬಾಲಕನಿಗೆ ವ್ಯಾನ್ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ಐವರನ್ನು ಚಿಕಿತ್ಸೆಗಾಗಿ ಸರ್ಕಾರಿ ಸಾಮಾನ್ಯ ಆಸ್ಪತ್ರೆಗೆ (GGH) ದಾಖಲಿಸಲಾಗಿದೆ. ಅಪಘಾತಕ್ಕೊಳಗಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕುಪ್ಪಂನ ಸರ್ಕಾರಿ ಸಾಮಾನ್ಯ ಆಸ್ಪತ್ರೆಗೆ ರವಾನಿಸಿದ್ದಾರೆ.