ಸರಣಿ ಅಪಘಾತ ಮೂವರು ಸಾವು
ಲೋಕದರ್ಶನ ವರದಿ
ಇಂಡಿ: ತಾಲೂಕಿನ ಝಳಕಿ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಎರಡು ಲಾರಿಗಳು ಮುಖಾಮುಖಿ ಡಿಕ್ಕಿ ನಂತರ ಲಾರಿಯ ಹಿಂಬದಿಯಲ್ಲಿದ್ದ ಕಾರ್ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತ ಚಾಲಕರನ್ನು ದಾದೇಶ್ಯಾಮ ಪ್ರಭುಲಾಲ ನಾಯಕ, ಮೂಕೇಶ ಉರ್ಫ ಪಪ್ಪುಲಾಲ ಧನ್ನಾ ಗುರ್ಜರ, ಕನ್ನಯ್ಯಾಲಾಲ ಮಾಂಗೀಲಾಲ ಎಂದು ಗುರುತಿಸಲಾಗಿದೆ.
ಮುಖಾಮುಖಿಯಾಗಿ ಡಿಕ್ಕಿಯಾದ ಲಾರಿಗಳ ಇಬ್ಬರೂ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದು ಪಲ್ಟಿಯಾದ ಲಾರಿಯಲ್ಲಿ ಕ್ಲೀನರ್ ಸಿಲುಕಿ ಸಾವನ್ನಪ್ಪಿದ್ದಾನೆ ಆಘಾತದ ಪರಿಣಾಮವಾಗಿ ಸುಮಾರು ಎರಡು ಘಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿ ಎರಡೂ ಬದಿಯಲ್ಲಿ ಸುಮಾರು ಹತ್ತು ಕಿ. ಮೀ ವರೆಗೆ ವಾಹನಗಳು ನಿಂತು ಟ್ರಾಫಿಕ್ ಜಾಮ್ ಆಗಿತ್ತು. ಪೊಲೀಸರು ಹಾಗೂ ಸಾರ್ವಜನಿಕರು ಪಲ್ಟಿಯಾದ ಲಾರಿಗಳ ತೆರವು ಕಾಯರ್ಾಚರಣೆ ನಡೆಸಿದ್ದರಿಂದ ಸಂಚಾರ ಮುಕ್ತವಾಯಿತು. ಈ ಕುರಿತು ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು 