ಸರಣಿ ಅಪಘಾತ ಮೂವರು ಸಾವು
ಲೋಕದರ್ಶನ ವರದಿ
ಇಂಡಿ: ತಾಲೂಕಿನ ಝಳಕಿ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಎರಡು ಲಾರಿಗಳು ಮುಖಾಮುಖಿ ಡಿಕ್ಕಿ ನಂತರ ಲಾರಿಯ ಹಿಂಬದಿಯಲ್ಲಿದ್ದ ಕಾರ್ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತ ಚಾಲಕರನ್ನು ದಾದೇಶ್ಯಾಮ ಪ್ರಭುಲಾಲ ನಾಯಕ, ಮೂಕೇಶ ಉರ್ಫ ಪಪ್ಪುಲಾಲ ಧನ್ನಾ ಗುರ್ಜರ, ಕನ್ನಯ್ಯಾಲಾಲ ಮಾಂಗೀಲಾಲ ಎಂದು ಗುರುತಿಸಲಾಗಿದೆ.
ಮುಖಾಮುಖಿಯಾಗಿ ಡಿಕ್ಕಿಯಾದ ಲಾರಿಗಳ ಇಬ್ಬರೂ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದು ಪಲ್ಟಿಯಾದ ಲಾರಿಯಲ್ಲಿ ಕ್ಲೀನರ್ ಸಿಲುಕಿ ಸಾವನ್ನಪ್ಪಿದ್ದಾನೆ ಆಘಾತದ ಪರಿಣಾಮವಾಗಿ ಸುಮಾರು ಎರಡು ಘಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿ ಎರಡೂ ಬದಿಯಲ್ಲಿ ಸುಮಾರು ಹತ್ತು ಕಿ. ಮೀ ವರೆಗೆ ವಾಹನಗಳು ನಿಂತು ಟ್ರಾಫಿಕ್ ಜಾಮ್ ಆಗಿತ್ತು. ಪೊಲೀಸರು ಹಾಗೂ ಸಾರ್ವಜನಿಕರು ಪಲ್ಟಿಯಾದ ಲಾರಿಗಳ ತೆರವು ಕಾಯರ್ಾಚರಣೆ ನಡೆಸಿದ್ದರಿಂದ ಸಂಚಾರ ಮುಕ್ತವಾಯಿತು. ಈ ಕುರಿತು ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 