ಮಗಳು ಪರಾರಿ; ಮನನೊಂದು ಒಂದೇ ಕುಟುಂಬದ ಮೂವರು ನೀರಿಗೆ ಹಾರಿ ಆತ್ಮಹತ್ಯೆ
Three members of the same family commit suicide by jumping into water
ಎಚ್.ಡಿ.ಕೋಟೆ 24: ಪಟ್ಟಣದ ಹೆಬ್ಬಾಳ ಜಲಾಶಯದಲ್ಲಿ ನೀರಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶನಿವಾರ ಮುಂಜಾನೆ ಜಲಾಶಯಕ್ಕೆ ಆಗಮಿಸಿದ ಮೂವರೂ ಡೆತ್ ನೋಟ್ ಬರೆದು, ದಡದಲ್ಲಿ ಬೈಕ್ ನಿಲ್ಲಿಸಿ, ನೀರಿಗೆ ಹಾರಿದ್ದಾರೆ. ಗ್ರಾಮಸ್ಥರು ಆ ಮಾರ್ಗವಾಗಿ ಸಂಚರಿಸುವಾಗ ಬೈಕ್ ನಿಲ್ಲಿಸಿರುವುದನ್ನು ಗಮನಿಸಿ, ಚಪ್ಪಲಿಗಳೂ ದಡದಲ್ಲಿ ಬಿಟ್ಟಿರುವುದನ್ನು ನೋಡಿ ಪರಿಶೀಲಿಸಿದಾಗ ಬೈಕ್ನಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ನಂತರ ಅವರು ಪೊಲೀಸರಿಗೆ ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು.
‘ಈಚೆಗೆ ಮಹದೇವಸ್ವಾಮಿ ದಂಪತಿಯ ಮೊದಲನೇ ಮಗಳು ಮನೆ ಬಿಟ್ಟು ಹೋಗಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಡೆತ್ ನೋಟ್ ಪರಿಶೀಲನೆ ಮಾಡಿದ ಬಳಿಕ ಕಾರಣ ಗೊತ್ತಾಗಲಿದೆ’ ಎಂದು ಪೊಲೀಸರು ತಿಳಿಸಿದರು.ಎಚ್.ಡಿ. ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದ ನಿವಾಸಿ ಮಹದೇವಸ್ವಾಮಿ (55), ಪತ್ನಿ ಮಂಜುಳಾ (42), ಪುತ್ರಿ ಹರ್ಷಿತಾ ಮೃತಪಟ್ಟವರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 