ಸಿಡಿಲು ಬಡಿದು ಸಾವು: ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ
ಲೋಕದರ್ಶನವರದಿ
ರಾಣೇಬೆನ್ನೂರು ಜೂ.17: ಇತ್ತೀಚೆಗೆ ತಾಲೂಕಿನ ಗಂಗಾಪುರ ಗ್ರಾಮದ ಚಿದಾನಂದಪ್ಪ ಕೃಷ್ಣಪ್ಪ ಹಳೇಗೌಡ್ರ ಅವರು ಕೃಷಿ ಚಟುವಟಿಕೆಯಲ್ಲಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ ಕಾರಣಕ್ಕಾಗಿ ಅವರ ಪತ್ನಿ ಮಮತಾ ಅವರಿಗೆ ಮತ್ತು ಮಂಜಪ್ಪ ನಂದ್ಯಾಲರವರ ಕುಟುಂಬಗಳಿಗೆ ಸಚಿವ ಆರ್.ಶಂಕರ ಅವರು 5 ಲಕ್ಷ ರು ಮೊತ್ತದ ಸರಕಾರದ ಪರಿಹಾರದ ಚೆಕ್ ವಿತರಿಸಿದರು. ಜೊತೆಗೆ ವಿವಿಧ ಕಾರಣಗಳಿಂದ ಮೃತರಾದ ಕುಟುಂಬಗಳಿಗೂ ಸಹ ಪರಿಹಾರದ ಚೆಕ್ಗಳನ್ನು ವಿತರಿಸಿದ ಸಚಿವರು ಇದೇ ಸಂದರ್ಭದಲ್ಲಿ ಸಿಡಿಲಿಗೆ ಬಲಿಯಾದ ಎತ್ತಿನ ಮಾಲಿಕ ಮಂಜಪ್ಪ ನಿಂಗಪ್ಪ ನಂದ್ಯಾಲ ಅವರಿಗೆ 25 ಸಾವಿರ ರೂ.ಗಳ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ತಹಶೀಲ್ದಾರ ಸಿ.ಎಸ್.ಕುಲಕಣರ್ಿ, ಮೇಡ್ಲೇರಿ ವೃತ್ತಾಧಿಕಾರಿ ವಾಗೀಶ ಮಳೇಮಠ, ಗ್ರಾಮಲೆಕ್ಕಾಧಿಕಾರಿ ಎಚ್.ಎಂ.ಐಶ್ವರ್ಯ, ಗ್ರಾಪಂ ಸಹಾಯಕ ಮುಕ್ತೇಶ ಸೇರಿದಂತೆ ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 