26ರಂದು ಪಟ್ಟಣದಲ್ಲಿ ತಿರಂಗಾ ಯಾತ್ರೆ
Tiranga Yatra in the city on the 26th
ತಾಳಿಕೋಟಿ 22: ಆಪರೇಷನ್ ಸಿಂಧೂರ ಕಾರ್ಯಾಚರಣೆ ಸ್ಮರಣೀಯವಾಗಿರಿಸಿ ದೇಶದ ಸೈನಿಕರ ಮನೋಬಲ ಹೆಚ್ಚಿಸಲು ಮೇ 26ರಂದು ಪಟ್ಟಣದಲ್ಲಿ ಸಮಸ್ತ ನಾಗರಿಕರ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ತಿರಂಗಾ ಯಾತ್ರೆ ಕಾರ್ಯಕ್ರಮ ನಡೆಯಲಿದ್ದು ಇದರಲ್ಲಿ ದೇಶ ಸೇವೆಯಲ್ಲಿರುವ ಹಾಗೂ ಯುದ್ಧ, ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮ ರಾಗಿರುವ ಸೈನಿಕರ ಕುಟುಂಬದ ಸದಸ್ಯರಿಗೆ ಸನ್ಮಾನಿಸಿ ಗೌರವಿಸುವ ವಿಶೇಷ ಕಾರ್ಯಕ್ರಮ ನಡೆಯಲಿದ್ದು ಇದರ ಯಶಸ್ವಿಗೆ ಎಲ್ಲರೂ ಸಹಕರಿಸಬೇಕು ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ಬುಧವಾರ ಪಟ್ಟಣದ ವಿಠಲ ಮಂದಿರದಲ್ಲಿ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ದೇಶದ ಗಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸೈನಿಕರ ಬಳಿ ಹೋಗಿ ಅವರನ್ನು ಅಭಿನಂದಸಲು ಸಾಧ್ಯವಾಗುವುದಿಲ್ಲ ಅದರ ಬದಲು ಅವರ ಕುಟುಂಬದ ಸದಸ್ಯರಿಗೆ ಸನ್ಮಾನಿಸಿ ಗೌರವಿಸಿ ಪ್ರೋತ್ಸಾಹಿಸಲು ಈ ಕಾರ್ಯಕ್ರಮ ಮೂಲಕ ಸಾಧ್ಯವಾಗುತ್ತದೆ ಅಂದು ನಡೆಯುವ ಈ ಕಾರ್ಯಕ್ರಮ ಸಂಪೂರ್ಣ ಜಾತ್ಯಾತೀತ ಹಾಗೂ ಪಕ್ಷಾತೀತವಾಗಿರುವುದು ರಾಷ್ಟ್ರೀಯತೆ ಜಾಗೃತಿಗೊಳಿಸುವುದು ಇದರ ಪ್ರಮುಖ ಉದ್ದೇಶವಾಗಿರುವುದು. ಇದರಲ್ಲಿ ಎಲ್ಲ ದೇಶಭಕ್ತರು ಭಾಗವಹಿಸಬೇಕಾಗಿದೆ ಎಂದರು.
ನಂತರ ಸಭಿಕರಿಂದ ಸಲಹೆ ಸೂಚನೆಗಳನ್ನು ತೆಗೆದುಕೊಂಡು ಕಾರ್ಯಕ್ರಮದ ಯಶಸ್ವಿಗಾಗಿ ಹತ್ತು ಸಮಿತಿಗಳನ್ನು ರಚಿಸಿ ಜವಾಬ್ದಾರಿಯನ್ನು ವಹಿಸಿಕೊಡಲಾಯಿತು. ಮೇ 26ರಂದು ಮಧ್ಯಾಹ್ನ 3 ಗಂಟೆಗೆ ಕೈಯಲ್ಲಿ ರಾಷ್ಟ್ರಧ್ವಜ ಹಿಡಿದುಕೊಂಡು ಬೃಹತ್ ತಿರಂಗಾ ರಾ್ಯಲಿ ಪಟ್ಟಣದ ಶಿವಾಜಿ ಸರ್ಕಲ್ ದಿಂದ ಆರಂಭವಾಗಿ ಮಹಾರಾಣಾ ಪ್ರತಾಪ್ ಸಿಂಹ ಸರ್ಕಲ್, ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್, ಕತ್ರಿ ಬಜಾರ್ ಮಾರ್ಗವಾಗಿ ವಿಠಲ ಮಂದಿರ ಹತ್ತಿರ ಮುಕ್ತಾಯಗೊಳ್ಳುವುದು ನಂತರ ಅಲ್ಲಿಯೇ ವೇದಿಕೆ ಕಾರ್ಯಕ್ರಮ ಜರುಗುವುದು ಎಂದು ನಿರ್ಣಯಿಸಲಾಯಿತು.
ಪೂರ್ವಭಾವಿ ಸಭೆಯಲ್ಲಿ ಪಟ್ಟಣದ ಗಣ್ಯರಾದ ಕಾಶಿನಾಥ ಮುರಾಳ, ದತ್ತು ಹೆಬಸೂರ, ಎಂ,ಎಸ್. ಸರಶೆಟ್ಟಿ, ವಾಸುದೇವ ಹೆಬಸೂರ, ಗಂಗಾಧರ ಕಸ್ತೂರಿ, ರಾಜು ಹಂಚಾಟೆ, ಶ್ರೀಕಾಂತ ಪತ್ತಾರ, ಜೈ ಸಿಂಗ್ ಮೂಲಿಮನಿ, ಪರಶುರಾಮ ಕಟ್ಟಿಮನಿ, ಸಾಹೇಬಗೌಡ ಬಿರಾದಾರ, ಬಸನಗೌಡ ವಣಿಕಿಹಾಳ, ಮುದುಕಪ್ಪ ಬಡಿಗೇರ, ನಿಂಗಣ್ಣ ಕುಂಟೋಜಿ, ಸುವರ್ಣ ಬಿರಾದಾರ, ಈಶ್ವರ ಹೂಗಾರ, ರಾಘು ಮಾನೆ, ಶಿವಶಂಕರ ಹಿರೇಮಠ, ರಾಘು ಬಿಜಾಪುರ, ರಾಜು ಸೊಂಡೂರ, ಮಾಜಿ ಸೈನಿಕರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಮತ್ತಿತರರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 